Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗಾಗಿ ಮಿಡಿದ ಪ್ರಕಾಶ್ ರೈ: ಹಣದ ಜೊತೆ ವಿಶೇಷ ಯೋಜನೆಗಳ ಭರವಸೆ
ಭಾರಿ ಮಳೆಯಿಂದ ತತ್ತರಗೊಂಡಿರುವ ಕೊಡಗು ಜಿಲ್ಲೆಯನ್ನ ಮತ್ತೆ ಮೊದಲಿನಂತೆ ಮಾಡಲು ಕರ್ನಾಟಕದ ವಿವಿಧ ಭಾಗದ ಜನತೆ ನೆರವು ನೀಡುತ್ತಿದ್ದಾರೆ. ತಿನ್ನಲು ಆಹಾರ, ಬಟ್ಟೆ ಹಾಗೂ ಅಗತ್ಯ ವಸ್ತುಗಳನ್ನ ಕೊಡಗು ಜನತೆಗೆ ಕಳುಹಿಸಿ ಸಹಾಯ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾ ನಟರು ಹಾಗೂ ಅವರ ಅಭಿಮಾನಿ ಸಂಘಗಳು ಕೂಡ ಮಲೆನಾಡಿನ ಮಕ್ಕಳ ಸಹಾಯಕ್ಕೆ ನಿಂತಿದ್ದಾರೆ. ಇದೀಗ, ಬಹುಭಾಷಾ ನಟ ಪ್ರಕಾಶ್ ರೈ ಕೊಡಗು ಜನತೆ ಹಣದ ನೆರವು ನೀಡಿದ್ದಾರೆ.
ಸದ್ಯಕ್ಕೆ 5 ಲಕ್ಷ ಹಣ ನೀಡುತ್ತಿರುವುದಾಗಿ ಖುದ್ದು ಪ್ರಕಾಶ್ ರೈ ಅವರೇ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಕೊಡಗು ಜಲ್ಲೆಯ ಏಳಿಗಿಗೆ ಎಲ್ಲ ರೀತಿಯಲ್ಲೂ ಬೆಂಬಲವಾಗಿರುತ್ತೇನೆ ಎಂದು ಹೇಳಿದ್ದಾರೆ.
ಕೊಡಗಿನವರ ನೆರವಿಗೆ ಧಾವಿಸಿದ ಕನ್ನಡ ಚಿತ್ರರಂಗದ ತಾರೆಯರು
#kodagufloods sent 5 lakhs to begin.. #justaskingfiundation #prakashrajfiundation will further take up reconstructing life in Kodagu and Kerala ..come let’s stand by them in this difficult times.. 🙏🙏please contribute through organisations around you .. let’s give back to life🙏 pic.twitter.com/JlnZ8XWKDq
— Prakash Raj (@prakashraaj) August 19, 2018
ಜೊತೆಗೆ #justaskingfiundation ಮತ್ತು #prakashrajfiundation ಮೂಲಕ ಕೊಡಗನ್ನ ಕಟ್ಟುವ ಹಲವು ಯೋಜನೆಗಳನ್ನ ಮುಂದೆ ರೂಪಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಕೊಡಗು ಜಿಲ್ಲೆಯ ಪ್ರವಾಹ ಪೀಡಿತರ ನೆರವಿಗೆ ಮುಂದಾದ ಚಂದನ್ ಶೆಟ್ಟಿ
ಪ್ರಕಾಶ್ ರೈ ಅವರಂತೆ ನಟ ದರ್ಶನ್, ಸುದೀಪ್, ಗಣೇಶ್, ಶಿವರಾಜ್ ಕುಮಾರ್ ಹೀಗೆ ಕನ್ನಡದ ಹಲವು ಸಿನಿತಾರೆಯರು ಕೊಡಗಿನ ಜನತೆಗೆ ನೆರವಾಗುವಂತೆ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡು ಬೆಂಬಲ ನೀಡುತ್ತಿದ್ದಾರೆ.