Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯಾಯಕ್ಕಾಗಿ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಲಾರ್ಡ್ ಪ್ರಥಮ್
Recommended Video
ನಟ ಹಾಗೂ ನಿರ್ದೇಶಕ ಪ್ರಥಮ್ ಒಂದಲ್ಲಾ ಒಂದು ವಿಚಾರದಿಂದ ಹಾಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಹೊಸ ವರ್ಷ ಪ್ರಾರಂಭದಲ್ಲೇ ನಟ ಪ್ರಥಮ್ ಒಳ್ಳೆ ಸುದ್ದಿಯನ್ನ ಅವರ ಅಭಿಮಾನಿಗಳಿಗೆ ನೀಡಿದ್ದಾರೆ. ಸಾಮಾನ್ಯವಾಗಿ ಸ್ಟಾರ್ ಗಳ ನ್ಯೂ ಇಯರ್ ಅಂದರೆ ಚೆನ್ನಾಗಿ ಪಾರ್ಟಿ ಮಾಡಿ ಎಂಜಾಯ್ ಮಾಡುತ್ತಾರೆ ಅನ್ನುವ ಊಹೆಗಳಿರುತ್ತವೆ. ಆದರೆ ಪ್ರಥಮ್ ನಾನು ಎಲ್ಲರಿಗಿಂತಲೂ ಭಿನ್ನ ಎನ್ನುವುದನ್ನು ಈ ಮೂಲಕ ನಿರೂಪಿಸಿದ್ದಾರೆ.
ಹೊಸ ವರ್ಷ ಒಂದೊಳ್ಳೆ ಕೆಲಸ ಮಾಡೋಣ ಎನ್ನುವ ಪ್ಲಾನ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದಾರೆ. ಪ್ರಥಮ್ ಸಿ ಎಂ ಅವರನ್ನ ಮೀಟ್ ಮಾಡಿರುವುದು ಅವರ ಸಿನಿಮಾದ ವಿಚಾರಕ್ಕೆ ಅಲ್ಲ. ವಿಜಯಪುರದಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕುಮಾರಿ ದಾನಮ್ಮ ಅವರಿಗಾಗಿ.
ಕೆ.ಎಸ್.ಅಶ್ವಥ್ ಪುತ್ರನ ಕಣ್ಣೀರು ಒರೆಸಲು ಮುಂದಾದ ಕನ್ನಡ ಚಿತ್ರರಂಗ
ದಾನಮ್ಮ ಅವರ ಕುಟುಂಬಕ್ಕೆ ಆರ್ಥಿಕ ಭದ್ರತೆ ಕೊಡಬೇಕು ಹಾಗೂ ಈ ವಿಚಾರ ನ್ಯಾಯಾಲಯದಲ್ಲಿ ಆದಷ್ಟು ಬೇಗ ಇತ್ಯರ್ಥವಾಗಬೇಕು ಮತ್ತು ದಾನಮ್ಮರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಪ್ರಥಮ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಮನವಿ ಪತ್ರವನ್ನ ಸ್ವೀಕರಿಸಿದ ಮುಖ್ಯಮಂತ್ರಿಗಳು ಪ್ರಥಮ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ರಾಜಕೀಯ ಗಣ್ಯರ ಜೊತೆ ಸೆಲ್ಫಿ ತೆಗಿಸಿಕೊಂಡು ಇವರು ನಮ್ಮ ಆತ್ಮೀಯರು ಅಂತ ಹೇಳಿಕೊಳ್ಳುತ್ತಿದ್ದ ಪ್ರಥಮ್ ಈ ಬಾರಿ ಸೆಲ್ಫಿ ಬೇಡ ಎಂದು ನಿರ್ಧರಿಸಿದರಂತೆ. ದಾನಮ್ಮನಿಗೆ ನ್ಯಾಯ ಸಿಗಲಿ ಎಂದು ಪ್ರಥಮ್ ಹೋರಾಟ ಪ್ರಾರಂಭ ಮಾಡಿದ್ದಾರೆ.