Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕತಾರ್ ನಲ್ಲಿ ಪುನೀತ್ ರಾಜ್ ಕುಮಾರ್ ಗೆ ಸಿಕ್ಕಿದೆ ಹೊಸ ಬಿರುದು
Recommended Video
ಪವರ್ ಸ್ಟಾರ್, ರಾಜರತ್ನ ಎಂದು ಕರೆಸಿಕೊಳ್ಳುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಈಗ ಹೊಸ ಬಿರುದು ಪಡೆದುಕೊಂಡಿದ್ದಾರೆ. ಕತಾರ್ ನಲ್ಲಿ ಅಪ್ಪುಗೆ ಹೊಸದೊಂದು ಬಿರುದು ನೀಡಿ ಗೌರವ ಸಲ್ಲಿಸಲಾಗಿದೆ.
ಕತಾರ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ನಟ ಪುನೀತ್ ರಾಜ್ ಕುಮಾರ್ ಹಾಗೂ ಸಾಹಿತಿ ಎಸ್ ಎಲ್ ಭೈರಪ್ಪ ಭಾಗಿಯಾಗಿದ್ದರು. ಭೈರಪ್ಪನವರಿಗೆ ಕತಾರ್ ಕನ್ನಡ ಸನ್ಮಾನ್ ಪ್ರಶಸ್ತಿ ನೀಡಲಾಯಿತು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 'ಇದನ್ನ' ಕಂಡ್ರೆ ಈಗಲೂ ಭಯ.!
ಪುನೀತ್ ರಾಜ್ ಕುಮಾರ್ ರಿಗೆ 'ಕಲಾ ಸಾರ್ವಭೌಮ' ಎಂದು ಹೊಸ ಬಿರುದು ನೀಡಲಾಗಿದೆ. ಈ ಮೂಲಕ ಪವರ್ ಸ್ಟಾರ್ ಗೆ ಮತ್ತೊಂದು ಹೆಸರು ಸಿಕ್ಕಿದೆ. ರಾಜ್ ಕುಮಾರ್ ನಟ ಸಾರ್ವಭೌಮ, ಶಿವರಾಜ್ ಕುಮಾರ್ ನಾಟ್ಯ ಸಾರ್ವಭೌಮ ಎಂದು ಹೆಸರು ಪಡೆದಿದ್ದು, ಇದೀಗ ಅಪ್ಪು 'ಕಲಾ ಸಾರ್ವಭೌಮ' ಆಗಿದ್ದಾರೆ.
ಈ ವರ್ಷ ಕತಾರ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಮುಖ್ಯ ಅತಿಥಿ ಆಗಿದ್ದರು. ಅವರ ಪತ್ನಿ ಅಶ್ವಿನಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಾದ್ಯಗೋಷ್ಟಿಯ ಮೆರವಣಿಗೆ ಮೂಲಕ ಸಮಾರಂಭಕ್ಕೆ ಅವರನ್ನು ಕರೆತಂದು ಸನ್ಮಾನಿಸಿದ್ದು, ಪ್ರಮುಖ ಆಕರ್ಷಣೆ ಆಗಿತ್ತು.
ಹುಟ್ಟಿದಾಗಿನಿಂದ ಜನರ ಪ್ರೀತಿ ನೋಡಿರುವ ನನಗೆ ವಿವಾದ ಯಾಕೆ ಬೇಕು: ಪುನೀತ್
ಅಂದಹಾಗೆ, ಪುನೀತ್ ರಾಜ್ ಕುಮಾರ್ ಸದ್ಯ 'ಯುವರತ್ನ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ.