Don't Miss!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರುಣಾನಿಧಿ ಮನೆಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ ಕರುಣಾನಿಧಿ ಅವರ ಮನೆಗೆ ಕನ್ನಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.
ಚೆನ್ನೈನ ಗೋಪಾಲಪುರಂದಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿದ ಪುನೀತ್ ಅವರ ಮನೆಯವರ ಜೊತೆ ಮಾತನಾಡಿದರು. ಕರುಣಾನಿಧಿ ಅವರ ಮಗ ಹಾಗೂ ಡಿಎಂಕೆ ನಾಯಕ ಸ್ಟಾಲಿನ್ ಅವರಿಗೆ ಧೈರ್ಯ ತುಂಬಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪುನೀತ್ ರಾಜ್ ಕುಮಾರ್ ''ಕರುಣಾನಿಧಿ ಅವರೊಬ್ಬ ದಿಗ್ಗಜ ನಾಯಕ. ಅವರ ನಿಧನಕ್ಕೆ ಸಂತಾಪ ಸೂಚಿಸಬೇಕಾಗಿರುವುದು ನಮ್ಮ ಕರ್ತವ್ಯ, ಹೀಗಾಗಿ ಅವರ ಮನೆಗೆ ಬಂದಿದ್ದೇನೆ'' ಎಂದರು.
'ಕರುಣಾನಿಧಿ'ಯ ನಿಧನಕ್ಕೆ ಸಂತಾಪ ಸೂಚಿಸಿದ ಚಿತ್ರರಂಗ
''ನಮ್ಮ ತಂದೆ ರಾಜ್ ಕುಮಾರ್ ಅವರ ಅಪಹರಣವಾಗಿದ್ದ ವೇಳೆ ಕರುಣಾನಿಧಿ ಅವರು ತುಂಬಾ ಸಹಾಯ ಮಾಡಿದ್ದಾರೆ. ಅವರ ಕುಟುಂಬದ ನಮ್ಮ ಕುಟುಂಬ ಒಳ್ಳೆ ನಂಟು ಹೊಂದಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದೇನೆ ಅಷ್ಟೇ'' ಎಂದು ತಿಳಿಸಿದರು.
ತಮಿಳು ಚಿತ್ರರಂಗದ ದಿಕ್ಕು ಬದಲಿಸಿದ್ದೇ ಕರುಣಾನಿಧಿಯ 'ಕ್ರಾಂತಿಕಾರಿ' ಬರಹ
ಕರುಣಾನಿಧಿ ಅವರು ಆಗಸ್ಟ್ 7 ರಂದು ಸಂಜೆ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕೇವಲ ರಾಜಕಾರಣದಲ್ಲಿ ಮಾತ್ರವಲ್ಲದೇ ಸಿನಿಮಾರಂಗದಲ್ಲೂ ಕರುಣಾನಿಧಿ ಉತ್ತಮ ಸಂಬಂಧ ಹೊಂದಿದ್ದರು. ಸುಮಾರು 60 ಕ್ಕೂ ಅಧಿಕ ಚಿತ್ರಗಳಿಗೆ ಕಥೆ ಮತ್ತು ಚಿತ್ರಕಥೆ ಬರೆದಿದ್ದರು.