ಕರುಣಾನಿಧಿ ಮನೆಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ ಕರುಣಾನಿಧಿ ಅವರ ಮನೆಗೆ ಕನ್ನಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.
ಚೆನ್ನೈನ ಗೋಪಾಲಪುರಂದಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿದ ಪುನೀತ್ ಅವರ ಮನೆಯವರ ಜೊತೆ ಮಾತನಾಡಿದರು. ಕರುಣಾನಿಧಿ ಅವರ ಮಗ ಹಾಗೂ ಡಿಎಂಕೆ ನಾಯಕ ಸ್ಟಾಲಿನ್ ಅವರಿಗೆ ಧೈರ್ಯ ತುಂಬಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪುನೀತ್ ರಾಜ್ ಕುಮಾರ್ ''ಕರುಣಾನಿಧಿ ಅವರೊಬ್ಬ ದಿಗ್ಗಜ ನಾಯಕ. ಅವರ ನಿಧನಕ್ಕೆ ಸಂತಾಪ ಸೂಚಿಸಬೇಕಾಗಿರುವುದು ನಮ್ಮ ಕರ್ತವ್ಯ, ಹೀಗಾಗಿ ಅವರ ಮನೆಗೆ ಬಂದಿದ್ದೇನೆ'' ಎಂದರು.

''ನಮ್ಮ ತಂದೆ ರಾಜ್ ಕುಮಾರ್ ಅವರ ಅಪಹರಣವಾಗಿದ್ದ ವೇಳೆ ಕರುಣಾನಿಧಿ ಅವರು ತುಂಬಾ ಸಹಾಯ ಮಾಡಿದ್ದಾರೆ. ಅವರ ಕುಟುಂಬದ ನಮ್ಮ ಕುಟುಂಬ ಒಳ್ಳೆ ನಂಟು ಹೊಂದಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದೇನೆ ಅಷ್ಟೇ'' ಎಂದು ತಿಳಿಸಿದರು.
ಕರುಣಾನಿಧಿ ಅವರು ಆಗಸ್ಟ್ 7 ರಂದು ಸಂಜೆ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕೇವಲ ರಾಜಕಾರಣದಲ್ಲಿ ಮಾತ್ರವಲ್ಲದೇ ಸಿನಿಮಾರಂಗದಲ್ಲೂ ಕರುಣಾನಿಧಿ ಉತ್ತಮ ಸಂಬಂಧ ಹೊಂದಿದ್ದರು. ಸುಮಾರು 60 ಕ್ಕೂ ಅಧಿಕ ಚಿತ್ರಗಳಿಗೆ ಕಥೆ ಮತ್ತು ಚಿತ್ರಕಥೆ ಬರೆದಿದ್ದರು.


Click it and Unblock the Notifications










