twitter
    For Quick Alerts
    ALLOW NOTIFICATIONS  
    For Daily Alerts

    ಕರುಣಾನಿಧಿ ಮನೆಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್

    By Bharath Kumar
    |

    ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ ಕರುಣಾನಿಧಿ ಅವರ ಮನೆಗೆ ಕನ್ನಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

    ಚೆನ್ನೈನ ಗೋಪಾಲಪುರಂದಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿದ ಪುನೀತ್ ಅವರ ಮನೆಯವರ ಜೊತೆ ಮಾತನಾಡಿದರು. ಕರುಣಾನಿಧಿ ಅವರ ಮಗ ಹಾಗೂ ಡಿಎಂಕೆ ನಾಯಕ ಸ್ಟಾಲಿನ್ ಅವರಿಗೆ ಧೈರ್ಯ ತುಂಬಿದರು.

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪುನೀತ್ ರಾಜ್ ಕುಮಾರ್ ''ಕರುಣಾನಿಧಿ ಅವರೊಬ್ಬ ದಿಗ್ಗಜ ನಾಯಕ. ಅವರ ನಿಧನಕ್ಕೆ ಸಂತಾಪ ಸೂಚಿಸಬೇಕಾಗಿರುವುದು ನಮ್ಮ ಕರ್ತವ್ಯ, ಹೀಗಾಗಿ ಅವರ ಮನೆಗೆ ಬಂದಿದ್ದೇನೆ'' ಎಂದರು.

    Actor Puneeth Rajkumar met DMK Leader MK Stalin

    'ಕರುಣಾನಿಧಿ'ಯ ನಿಧನಕ್ಕೆ ಸಂತಾಪ ಸೂಚಿಸಿದ ಚಿತ್ರರಂಗ'ಕರುಣಾನಿಧಿ'ಯ ನಿಧನಕ್ಕೆ ಸಂತಾಪ ಸೂಚಿಸಿದ ಚಿತ್ರರಂಗ

    ''ನಮ್ಮ ತಂದೆ ರಾಜ್ ಕುಮಾರ್ ಅವರ ಅಪಹರಣವಾಗಿದ್ದ ವೇಳೆ ಕರುಣಾನಿಧಿ ಅವರು ತುಂಬಾ ಸಹಾಯ ಮಾಡಿದ್ದಾರೆ. ಅವರ ಕುಟುಂಬದ ನಮ್ಮ ಕುಟುಂಬ ಒಳ್ಳೆ ನಂಟು ಹೊಂದಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದೇನೆ ಅಷ್ಟೇ'' ಎಂದು ತಿಳಿಸಿದರು.

    ತಮಿಳು ಚಿತ್ರರಂಗದ ದಿಕ್ಕು ಬದಲಿಸಿದ್ದೇ ಕರುಣಾನಿಧಿಯ 'ಕ್ರಾಂತಿಕಾರಿ' ಬರಹ ತಮಿಳು ಚಿತ್ರರಂಗದ ದಿಕ್ಕು ಬದಲಿಸಿದ್ದೇ ಕರುಣಾನಿಧಿಯ 'ಕ್ರಾಂತಿಕಾರಿ' ಬರಹ

    ಕರುಣಾನಿಧಿ ಅವರು ಆಗಸ್ಟ್ 7 ರಂದು ಸಂಜೆ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕೇವಲ ರಾಜಕಾರಣದಲ್ಲಿ ಮಾತ್ರವಲ್ಲದೇ ಸಿನಿಮಾರಂಗದಲ್ಲೂ ಕರುಣಾನಿಧಿ ಉತ್ತಮ ಸಂಬಂಧ ಹೊಂದಿದ್ದರು. ಸುಮಾರು 60 ಕ್ಕೂ ಅಧಿಕ ಚಿತ್ರಗಳಿಗೆ ಕಥೆ ಮತ್ತು ಚಿತ್ರಕಥೆ ಬರೆದಿದ್ದರು.

    English summary
    Kannada Actor Puneeth Rajkumar met DmkLeader MK Stalin and expressed his condolence over the demise of Kalaignar Ayya earlier today (august 13th).
    Monday, August 13, 2018, 19:21
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X