Don't Miss!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರುಣಾನಿಧಿ ಮನೆಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ ಕರುಣಾನಿಧಿ ಅವರ ಮನೆಗೆ ಕನ್ನಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.
ಚೆನ್ನೈನ ಗೋಪಾಲಪುರಂದಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿದ ಪುನೀತ್ ಅವರ ಮನೆಯವರ ಜೊತೆ ಮಾತನಾಡಿದರು. ಕರುಣಾನಿಧಿ ಅವರ ಮಗ ಹಾಗೂ ಡಿಎಂಕೆ ನಾಯಕ ಸ್ಟಾಲಿನ್ ಅವರಿಗೆ ಧೈರ್ಯ ತುಂಬಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪುನೀತ್ ರಾಜ್ ಕುಮಾರ್ ''ಕರುಣಾನಿಧಿ ಅವರೊಬ್ಬ ದಿಗ್ಗಜ ನಾಯಕ. ಅವರ ನಿಧನಕ್ಕೆ ಸಂತಾಪ ಸೂಚಿಸಬೇಕಾಗಿರುವುದು ನಮ್ಮ ಕರ್ತವ್ಯ, ಹೀಗಾಗಿ ಅವರ ಮನೆಗೆ ಬಂದಿದ್ದೇನೆ'' ಎಂದರು.
'ಕರುಣಾನಿಧಿ'ಯ ನಿಧನಕ್ಕೆ ಸಂತಾಪ ಸೂಚಿಸಿದ ಚಿತ್ರರಂಗ
''ನಮ್ಮ ತಂದೆ ರಾಜ್ ಕುಮಾರ್ ಅವರ ಅಪಹರಣವಾಗಿದ್ದ ವೇಳೆ ಕರುಣಾನಿಧಿ ಅವರು ತುಂಬಾ ಸಹಾಯ ಮಾಡಿದ್ದಾರೆ. ಅವರ ಕುಟುಂಬದ ನಮ್ಮ ಕುಟುಂಬ ಒಳ್ಳೆ ನಂಟು ಹೊಂದಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದೇನೆ ಅಷ್ಟೇ'' ಎಂದು ತಿಳಿಸಿದರು.
ತಮಿಳು ಚಿತ್ರರಂಗದ ದಿಕ್ಕು ಬದಲಿಸಿದ್ದೇ ಕರುಣಾನಿಧಿಯ 'ಕ್ರಾಂತಿಕಾರಿ' ಬರಹ
ಕರುಣಾನಿಧಿ ಅವರು ಆಗಸ್ಟ್ 7 ರಂದು ಸಂಜೆ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕೇವಲ ರಾಜಕಾರಣದಲ್ಲಿ ಮಾತ್ರವಲ್ಲದೇ ಸಿನಿಮಾರಂಗದಲ್ಲೂ ಕರುಣಾನಿಧಿ ಉತ್ತಮ ಸಂಬಂಧ ಹೊಂದಿದ್ದರು. ಸುಮಾರು 60 ಕ್ಕೂ ಅಧಿಕ ಚಿತ್ರಗಳಿಗೆ ಕಥೆ ಮತ್ತು ಚಿತ್ರಕಥೆ ಬರೆದಿದ್ದರು.