Don't Miss!
- News
ಸೋದರರಂತೆ ಇದ್ದವರ ನಡುವೆ ಹುಳಿ ಹಿಂಡಿದ ಲಕ್ಷ್ಮಿ ಹೆಬ್ಬಾಳ್ಕರ್ 'ವಿಷಕನ್ಯೆ': ಮಹಾಸಂಘರ್ಷಕ್ಕೆ ಮುನ್ನುಡಿ ಬರೆದ ರಮೇಶ ಜಾರಕಿಹೊಳಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Sports
WIPL 2023: ಮಹಿಳಾ ಐಪಿಎಲ್ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹೃದಯಾಘಾತದಿಂದ ನಟ ರಘುವೀರ್ ವಿಧಿವಶ
'ಚೈತ್ರದ ಪ್ರೇಮಾಂಜಲಿ' ಖ್ಯಾತಿಯ ನಟ ರಘುವೀರ್ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಗುರುವಾರ (ಮೇ.8) ರಾತ್ರಿ ವಿಧಿವಶರಾಗಿದ್ದರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ಅವರು ಆನಾರೋಗ್ಯದಿಂದ ಬಳಲುತ್ತಿದ್ದರು.
ಸಂಪಂಗಿರಾಮ
ನಗರದ
ತಮ್ಮ
ನಿವಾಸದಲ್ಲಿ
ಇದಕ್ಕಿದ್ದಂತೆ
ಕುಸಿದುಬಿದ್ದ
ಅವರನ್ನು
ಕೂಡಲೆ
ಬಿಟಿಎಂ
ಲೇಔಟ್
ನ
ಗಂಗೋತ್ರಿ
ಆಸ್ಪತ್ರೆಗೆ
ದಾಖಲಿಸಲಾಯಿತು.
ಬಳಿಕ
ಅಲ್ಲಿಂದ
ಅವರನ್ನು
ಬನ್ನೇರುಘಟ್ಟದ
ಸಾಗರ್
ಅಪಲೋ
ಆಸ್ಪತ್ರೆಗೆ
ಸ್ಥಳಾಂತರಿಸಲಾಯಿತು.
ಅಲ್ಲಿ
ವೈದ್ಯರು
ಅವರು
ಮೃತಪಟ್ಟಿದ್ದಾಗಿ
ಖಚಿತಪಡಿಸಿದರು.
[ಚೈತ್ರದ
ಪ್ರೇಮಾಂಜಲಿ
ರಘುವೀರ್
ಈಗ
ಆಟೋ
ಡ್ರೈವರ್!]
ರಘುವೀರ್ ಅವರು ಬಹಳ ಚಿಕ್ಕ ವಯಸ್ಸಿಗೆ ಮೃತಪಟ್ಟಿರುವುದು ದುರದೃಷ್ಟಕರ. ಕನ್ನಡ ಚಿತ್ರರಂಗ ಹಾಗೂ ಅವರ ಅಭಿಮಾನಿಗಳು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ರಘುವೀರ್ ಅವರ ಅಂತ್ಯಕ್ರಿಯೆ ಶುಕ್ರವಾರ (ಮೇ 9) ದೊಡ್ಡ ಆಲದ ಮರದ ಸಮೀಪ ಅವರ ಫಾರ್ಮ್ ಹೌಸ್ ನಲ್ಲಿ ನೆರವೇರಲಿದೆ. ಬಹುತೇಕ ಅವರ ಸಂಬಂಧಿಕರು ಚೆನ್ನೈನಲ್ಲಿದ್ದು ಅವರೆಲ್ಲ ಇಂದು ಬೆಂಗಳೂರಿಗೆ ಬಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
1992ರಲ್ಲಿ 'ಚೈತ್ರದ ಪ್ರೇಮಾಂಜಲಿ' ಚಿತ್ರದ ಮೂಲಕ ಕನ್ನಡಚಿತ್ರರಂಗಕ್ಕೆ ಅಡಿಯಿಟ್ಟ ರಘು ಬಳಿಕ ಹಲವಾರು ಚಿತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ ಕಲಾವಿದ. ಚೈತ್ರದ ಪ್ರೇಮಾಂಜಲಿ ಚಿತ್ರ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರ ಚೊಚ್ಚಲ ನಿರ್ದೇಶನದ ಚಿತ್ರವೂ ಹೌದು. ಹಂಸಲೇಖ ಅವರ ಸಂಗೀತದ ಹಾಡುಗಳು ಚಿತ್ರಕ್ಕೆ ಇನ್ನಷ್ಟು ಮೆರುಗು ತಂದಿದ್ದವು.
ಶೃಂಗಾರ
ಕಾವ್ಯ,
ಉಯ್ಯಾಲೆ,
ಕಾವೇರಿ
ತೀರದಲಿ,
ನವಿಲೂರ
ನೈದಿಲೆ,
ಆಗಸ್ಟ್
15
ಮುಂತಾದ
ಚಿತ್ರಗಳಲ್ಲಿ
ರಘುವೀರ್
ಅಭಿನಯಿಸಿದ್ದಾರೆ.
'ಮೊದಲ
ಚುಂಬನ'
ಚಿತ್ರ
ಇನಷ್ಟೆ
ತೆರೆಕಾಣಬೇಕಾಹಿದೆ.
ರಘುವೀರ್
ಅವರ
ಅಕಾಲಿಕ
ಸಾವು
ಕನ್ನಡಚಿತ್ರರಂಗಕ್ಕೆ
ಆಘಾತ
ನೀಡಿದೆ.
(ಒನ್ಇಂಡಿಯಾ
ಕನ್ನಡ)