Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
18 ವರ್ಷಗಳ ಬಳಿಕ ರಾಜ್ ಕಿಡ್ನಾಪ್ ತೀರ್ಪು : 9 ಆರೋಪಿಗಳು ಪ್ರಕರಣದಿಂದ ಖುಲಾಸೆ!
Recommended Video
ವರ ನಟ ಡಾ ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಕಿಡ್ನಾಪ್ ಮಾಡಿದ್ದ ಪ್ರಕರಣದ ತೀರ್ಪು ಬಂದಿದೆ. ತಮಿಳುನಾಡಿನ ಈರೋಡ್ ಜಿಲ್ಲಾ ನ್ಯಾಯಾಲಯ ಈಗ ಪ್ರಕರಣದ ತೀರ್ಪು ನೀಡಿದೆ.
ಸೂಕ್ತ ಸಾಕ್ಷ್ಯ ಆಧಾರ ಇಲ್ಲದ ಕಾರಣ ಕಿಡ್ನಾಪ್ ಆರೋಪವನ್ನು ಸಾಬೀತು ಮಾಡಲು ಸಾಧ್ಯ ಆಗಿಲ್ಲ. ಈ ಕಾರಣ 9 ಆರೋಪಿಗಳನ್ನು ಈ ಪ್ರಕರಣದಿಂದ ಖುಲಾಸೆಗೊಳಿಸುವಂತೆ ಈರೋಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಮಣಿ ಅವರು ಆದೇಶ ನೀಡಿದ್ದಾರೆ.
ಡಾ. ರಾಜ್ ಕುಮಾರ್ ಕಿಡ್ನಾಪ್ ಪ್ರಕರಣದ ತೀರ್ಪು ಪ್ರಕಟ
2000 ರಲ್ಲಿ ರಾಜ್ ಕುಮಾರ್ ಅವರನ್ನು ವೀರಪ್ಪನ್ ಅಪಹರಣ ಮಾಡಿದ್ದ. ಆದರೆ, ಅದರ ವಿಚಾರಣೆ 11 ವರ್ಷಗಳ ಬಳಿಕ ಅಂದರೆ 2011 ರಲ್ಲಿ ಶುರು ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಗಳ ಮೇಲೆ ಆರೋಪ ಇತ್ತು.
13 ಆರೋಪಿಗಳಲ್ಲಿ ವೀರಪ್ಪನ್, ಸೇತುಕುಳಿ ಗೋವಿಂದನ್ ಸೇರಿದಂತೆ 4 ಮಂದಿ ನಿಧನ ಹೊಂದಿದ್ದಾರೆ. ಉಳಿದವರಿಗೆ ಈಗ ಬಿಡುಗಡೆಯ ಭಾಗ್ಯ ಸಿಕ್ಕಿದೆ.
ಈ ಪ್ರಕರಣದಲ್ಲಿ ಪಾರ್ವತಮ್ಮ ರಾಜ್ ಕುಮಾರ್, ಅವರ ಸಹೋದರ ಚಿನ್ನೆಗೌಡ, ತಮಿಳಿನಾಡಿನ ಅಧಿಕಾರಿಗಳು ಸೇರಿದಂತೆ ನೂರಕ್ಕು ಹೆಚ್ಚು ಜನರು ಸಾಕ್ಷಿ ಹೇಳಿದ್ದರು. ಆದರೆ, ಇಂದು ಈ ಬಗ್ಗೆ ತೀರ್ಪು ಪ್ರಕಟ ಆಗಿದ್ದು. ಸೂಕ್ತ ಸಾಕ್ಷ್ಯ ಆಧಾರ ಇಲ್ಲದ ಕಾರಣ ಆರೋಪಿಗಳ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದೆ.