Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
18 ವರ್ಷಗಳ ಬಳಿಕ ರಾಜ್ ಕಿಡ್ನಾಪ್ ತೀರ್ಪು : 9 ಆರೋಪಿಗಳು ಪ್ರಕರಣದಿಂದ ಖುಲಾಸೆ!
Recommended Video
ವರ ನಟ ಡಾ ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಕಿಡ್ನಾಪ್ ಮಾಡಿದ್ದ ಪ್ರಕರಣದ ತೀರ್ಪು ಬಂದಿದೆ. ತಮಿಳುನಾಡಿನ ಈರೋಡ್ ಜಿಲ್ಲಾ ನ್ಯಾಯಾಲಯ ಈಗ ಪ್ರಕರಣದ ತೀರ್ಪು ನೀಡಿದೆ.
ಸೂಕ್ತ ಸಾಕ್ಷ್ಯ ಆಧಾರ ಇಲ್ಲದ ಕಾರಣ ಕಿಡ್ನಾಪ್ ಆರೋಪವನ್ನು ಸಾಬೀತು ಮಾಡಲು ಸಾಧ್ಯ ಆಗಿಲ್ಲ. ಈ ಕಾರಣ 9 ಆರೋಪಿಗಳನ್ನು ಈ ಪ್ರಕರಣದಿಂದ ಖುಲಾಸೆಗೊಳಿಸುವಂತೆ ಈರೋಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಮಣಿ ಅವರು ಆದೇಶ ನೀಡಿದ್ದಾರೆ.
ಡಾ. ರಾಜ್ ಕುಮಾರ್ ಕಿಡ್ನಾಪ್ ಪ್ರಕರಣದ ತೀರ್ಪು ಪ್ರಕಟ
2000 ರಲ್ಲಿ ರಾಜ್ ಕುಮಾರ್ ಅವರನ್ನು ವೀರಪ್ಪನ್ ಅಪಹರಣ ಮಾಡಿದ್ದ. ಆದರೆ, ಅದರ ವಿಚಾರಣೆ 11 ವರ್ಷಗಳ ಬಳಿಕ ಅಂದರೆ 2011 ರಲ್ಲಿ ಶುರು ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಗಳ ಮೇಲೆ ಆರೋಪ ಇತ್ತು.
13 ಆರೋಪಿಗಳಲ್ಲಿ ವೀರಪ್ಪನ್, ಸೇತುಕುಳಿ ಗೋವಿಂದನ್ ಸೇರಿದಂತೆ 4 ಮಂದಿ ನಿಧನ ಹೊಂದಿದ್ದಾರೆ. ಉಳಿದವರಿಗೆ ಈಗ ಬಿಡುಗಡೆಯ ಭಾಗ್ಯ ಸಿಕ್ಕಿದೆ.
ಈ ಪ್ರಕರಣದಲ್ಲಿ ಪಾರ್ವತಮ್ಮ ರಾಜ್ ಕುಮಾರ್, ಅವರ ಸಹೋದರ ಚಿನ್ನೆಗೌಡ, ತಮಿಳಿನಾಡಿನ ಅಧಿಕಾರಿಗಳು ಸೇರಿದಂತೆ ನೂರಕ್ಕು ಹೆಚ್ಚು ಜನರು ಸಾಕ್ಷಿ ಹೇಳಿದ್ದರು. ಆದರೆ, ಇಂದು ಈ ಬಗ್ಗೆ ತೀರ್ಪು ಪ್ರಕಟ ಆಗಿದ್ದು. ಸೂಕ್ತ ಸಾಕ್ಷ್ಯ ಆಧಾರ ಇಲ್ಲದ ಕಾರಣ ಆರೋಪಿಗಳ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದೆ.