Just In
Don't Miss!
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- News
ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ: 15 ಕಾರ್ಮಿಕರ ಸಾವಿನ ಶಂಕೆ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟ ರಕ್ಷಿತ್ ಶೆಟ್ಟಿ 'ವಾಂಟೆಡ್ ಡೆಡ್ ಆರ್ ಅಲೈವ್'
ಸ್ಯಾಂಡಲ್ ವುಡ್ ನಲ್ಲಿ ಹೊಸ ಭರವಸೆಯ ನಿರ್ದೇಶಕರಾಗಿ ಹೊರಹೊಮ್ಮಿದವರು ಬಿಎಂ ಗಿರಿರಾಜ್. ಭಿನ್ನ ರೀತಿಯ ಚಿತ್ರಗಳ ಮೂಲಕ ಗಮನಸೆಳೆಯುತ್ತಿರುವ ಗಿರಿರಾಜ್ ಅವರ ಮುಂದಿನ ಚಿತ್ರದ ಬಗ್ಗೆ ಕುತೂಹಲ ಇದ್ದೇ ಇದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗಿನ 'ಮೈತ್ರಿ' ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ಅವರ ಮುಂದಿನ ಚಿತ್ರ ರಕ್ಷಿತ್ ಶೆಟ್ಟಿ ಜೊತೆಗೆ ಪಕ್ಕಾ ಆಗಿದೆ. ಸಾಮಾನ್ಯವಾಗಿ ಗಿರಿರಾಜ್ ಅವರ ಚಿತ್ರಗಳು ಸೈಲೆಂಟ್ ಆಗಿ ಸೆಟ್ಟೇರಿದರೂ ಬಿಡುಗಡೆ ಬಳಿಕ ಸದ್ದು ಮಾಡುವುದು ಗೊತ್ತೇ ಇದೆ. [ಮೈತ್ರಿ ಚಿತ್ರ ವಿಮರ್ಶೆ]
'ವಾಂಟೆಡ್ - ಡೆಡ್ ಆರ್ ಅಲೈವ್' ಎಂದು ಮುಂದಿನ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಚಿತ್ರವನ್ನು ಕೆ ಮಂಜು ನಿರ್ಮಿಸುತ್ತಿದ್ದು ಜೂನ್, ಜುಲೈ ವೇಳೆಗೆ ಚಿತ್ರ ಸೆಟ್ಟೇರುವ ಸಾಧ್ಯತೆಗಳಿವೆ. ಸದ್ಯಕ್ಕೆ ಗಿರಿರಾಜ್ ಹಾಗೂ ರಕ್ಷಿತ್ ಶೆಟ್ಟಿ ಅವರು ತಮ್ಮದೇ ಪ್ರಾಜೆಕ್ಟ್ ಗಳಲ್ಲಿ ಬಿಜಿಯಾಗಿದ್ದು, ಅವು ಮುಗಿದ ಮೇಲೆ 'ವಾಂಟೆಡ್' ಚಿತ್ರ ಆರಂಭವಾಗಲಿದೆ.
ಈ ಹಿಂದೆಯೇ ರಕ್ಷಿತ್ ಶೆಟ್ಟಿ ಜೊತೆಗಿನ ಚಿತ್ರವನ್ನು ಮಂಜು ಪ್ರಕಟಿಸಿದ್ದರು. ಆ ಚಿತ್ರಕ್ಕೆ 'ಎಕ್ಕಾ ರಾಜ ರಾಣಿ' ಎಂದು ಹೆಸರಿಡಲಾಗಿತ್ತು. 'ಬಾಲ್ ಪೆನ್' ಚಿತ್ರಕ್ಕೆ ನಿರ್ದೇಶಿಸಿದ್ದ ಶಶಿಕಾಂತ್ ಅವರು ಆಕ್ಷನ್ ಕಟ್ ಹೇಳಬೇಕಾಗಿದ್ದ ಚಿತ್ರ. ಆದರೆ ಕಾರಣಾಂತರಗಳಿಂದ ಚಿತ್ರ ಸೆಟ್ಟೇರಲೇ ಇಲ್ಲ.