Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ರಕ್ಷಿತ್ ಶೆಟ್ಟಿ 'ವಾಂಟೆಡ್ ಡೆಡ್ ಆರ್ ಅಲೈವ್'
ಸ್ಯಾಂಡಲ್ ವುಡ್ ನಲ್ಲಿ ಹೊಸ ಭರವಸೆಯ ನಿರ್ದೇಶಕರಾಗಿ ಹೊರಹೊಮ್ಮಿದವರು ಬಿಎಂ ಗಿರಿರಾಜ್. ಭಿನ್ನ ರೀತಿಯ ಚಿತ್ರಗಳ ಮೂಲಕ ಗಮನಸೆಳೆಯುತ್ತಿರುವ ಗಿರಿರಾಜ್ ಅವರ ಮುಂದಿನ ಚಿತ್ರದ ಬಗ್ಗೆ ಕುತೂಹಲ ಇದ್ದೇ ಇದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗಿನ 'ಮೈತ್ರಿ' ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ಅವರ ಮುಂದಿನ ಚಿತ್ರ ರಕ್ಷಿತ್ ಶೆಟ್ಟಿ ಜೊತೆಗೆ ಪಕ್ಕಾ ಆಗಿದೆ. ಸಾಮಾನ್ಯವಾಗಿ ಗಿರಿರಾಜ್ ಅವರ ಚಿತ್ರಗಳು ಸೈಲೆಂಟ್ ಆಗಿ ಸೆಟ್ಟೇರಿದರೂ ಬಿಡುಗಡೆ ಬಳಿಕ ಸದ್ದು ಮಾಡುವುದು ಗೊತ್ತೇ ಇದೆ. [ಮೈತ್ರಿ ಚಿತ್ರ ವಿಮರ್ಶೆ]
'ವಾಂಟೆಡ್ - ಡೆಡ್ ಆರ್ ಅಲೈವ್' ಎಂದು ಮುಂದಿನ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಚಿತ್ರವನ್ನು ಕೆ ಮಂಜು ನಿರ್ಮಿಸುತ್ತಿದ್ದು ಜೂನ್, ಜುಲೈ ವೇಳೆಗೆ ಚಿತ್ರ ಸೆಟ್ಟೇರುವ ಸಾಧ್ಯತೆಗಳಿವೆ. ಸದ್ಯಕ್ಕೆ ಗಿರಿರಾಜ್ ಹಾಗೂ ರಕ್ಷಿತ್ ಶೆಟ್ಟಿ ಅವರು ತಮ್ಮದೇ ಪ್ರಾಜೆಕ್ಟ್ ಗಳಲ್ಲಿ ಬಿಜಿಯಾಗಿದ್ದು, ಅವು ಮುಗಿದ ಮೇಲೆ 'ವಾಂಟೆಡ್' ಚಿತ್ರ ಆರಂಭವಾಗಲಿದೆ.
ಈ ಹಿಂದೆಯೇ ರಕ್ಷಿತ್ ಶೆಟ್ಟಿ ಜೊತೆಗಿನ ಚಿತ್ರವನ್ನು ಮಂಜು ಪ್ರಕಟಿಸಿದ್ದರು. ಆ ಚಿತ್ರಕ್ಕೆ 'ಎಕ್ಕಾ ರಾಜ ರಾಣಿ' ಎಂದು ಹೆಸರಿಡಲಾಗಿತ್ತು. 'ಬಾಲ್ ಪೆನ್' ಚಿತ್ರಕ್ಕೆ ನಿರ್ದೇಶಿಸಿದ್ದ ಶಶಿಕಾಂತ್ ಅವರು ಆಕ್ಷನ್ ಕಟ್ ಹೇಳಬೇಕಾಗಿದ್ದ ಚಿತ್ರ. ಆದರೆ ಕಾರಣಾಂತರಗಳಿಂದ ಚಿತ್ರ ಸೆಟ್ಟೇರಲೇ ಇಲ್ಲ.