Don't Miss!
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಬ್ಬುಲಿ'ಯಲ್ಲಿ ಸುದೀಪ್ ಗೆ ಎದುರಾಗಲಿರುವ ವಿಲನ್ ಇವರೇ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ನಿರ್ದೇಶಕ 'ಗಜಕೇಸರಿ' ಕೃಷ್ಣ ಅವರ ಜುಗಲ್ ಬಂದಿಯಲ್ಲಿ ಮೂಡಿಬರುತ್ತಿರುವ 'ಹೆಬ್ಬುಲಿ' ಸಿನಿಮಾ ಸದ್ಯಕ್ಕೆ ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿ ಮಾಡುತ್ತಿದೆ.
ಈ ಮೊದಲು ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ಅವರು ಈ ಚಿತ್ರದಲ್ಲಿ ಸುದೀಪ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ ಅನ್ನೋ ಸುದ್ದಿ ಖಚಿತವಾದ ಬೆನ್ನಲ್ಲೇ ಇದೀಗ ಸುದೀಪ್ ಅವರಿಗೆ ಎದುರಾಗಿ ಖಳನಾಯಕನಾಗಿ ಪರಭಾಷಾ ನಟ ರವಿ ಕಿಶನ್ ಅವರು ಮಿಂಚಲಿದ್ದಾರೆ ಅಂತ ಸುದ್ದಿಯಾಗಿದೆ.['ಹೆಬ್ಬುಲಿ'ಯಲ್ಲಿ ಅಮಲಾ ಮಾಡಲಿರುವ ಪಾತ್ರ ಏನಿರಬಹುದು?]
ಹೌದು ಹಿಂದಿ ಹಾಗೂ ಭೋಜ್ ಪುರಿ ಖ್ಯಾತಿಯ ನಟ ರವಿ ಕಿಶನ್ ಅವರು 'ಹೆಬ್ಬುಲಿ' ಚಿತ್ರದಲ್ಲಿ ಕಿಚ್ಚ ಸುದೀಪ್ ಅವರಿಗೆ ಎದುರಾಳಿಯಾಗಿ ಖಳನಟನ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಸುದ್ದಿಯನ್ನು ಖುದ್ದು ಎಸ್.ಕೃಷ್ಣ ಅವರೇ ಬಹಿರಂಗಪಡಿಸಿದ್ದಾರೆ.
ಈ ಮೊದಲು ನಟ ರವಿ ಕಿಶನ್ ಅವರು ರವಿತೇಜಾ ಅವರ 'ಕಿಕ್ 2' ಮತ್ತು ಅಲ್ಲು ಅರ್ಜುನ್ ಅವರ ತೆಲುಗು ಸಿನಿಮಾ 'ರೇಸ್ ಗುರ್ರಂ' ನಲ್ಲಿ ಖಳ ನಟನಾಗಿ ಮಿಂಚಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.[ಕಿಚ್ಚ ಸುದೀಪ್ ರ 'ಹೆಬ್ಬುಲಿ'ಗೆ ನಾಯಕಿ ಇವರೇನಾ?]
ಈ ಹಿಂದೆ 'ಹೆಬ್ಬುಲಿ' ಚಿತ್ರಕ್ಕೆ ಸಂಪತ್ ರಾಜ್ ಅವರು ಇನ್ನೋರ್ವ ಖಳನಟನಾಗಿ ಆಯ್ಕೆಯಾಗಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರ ಜಾಗಕ್ಕೆ ಇದೀಗ ಭೋಜ್ ಪುರಿ ನಟ ರವಿ ಕಿಶನ್ ಅವರು ಎಂಟ್ರಿಯಾಗಿದ್ದಾರೆ.
ಹಲವಾರು ಹಿಂದಿ ಸಿನಿಮಾ ಸೇರಿದಂತೆ ತೆಲುಗು ಸಿನಿಮಾಗಳಲ್ಲಿ ಖಳ ನಟನಾಗಿ ಖ್ಯಾತಿ ಪಡೆದಿರುವ ರವಿ ಕಿಶನ್ ಅವರು ಇದೀಗ 'ಹೆಬ್ಬುಲಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.[ಆರಂಭಿಕ ಹಂತದಲ್ಲೇ ರೆಕಾರ್ಡ್ ಬ್ರೇಕ್ ಮಾಡ್ತಾರಾ ಕಿಚ್ಚ ಸುದೀಪ್]
ಇನ್ನುಳಿದಂತೆ 'ಹೆಬ್ಬುಲಿ' ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ರವಿ ಶಂಕರ್, ತಮಿಳು-ತೆಲುಗು ಖ್ಯಾತಿಯ ಖಳನಟ ಕಬೀರ್ ದುಹಾನ್ ಸಿಂಗ್ ಮತ್ತು ಕಾಮಿಡಿ ನಟ ಚಿಕ್ಕಣ್ಣ ಅವರು ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಎಸ್.ವಿ ಪ್ರೊಡಕ್ಷನ್ಸ್ ಮತ್ತು ಉಮಾಪತಿ ಫಿಲ್ಮ್ ಸಹಯೋಗದಲ್ಲಿ ತಯಾರಾಗುತ್ತಿರುವ 'ಹೆಬ್ಬುಲಿ' ಸಿನಿಮಾ ಮೇ 1 ರಂದು ಅದ್ದೂರಿಯಾಗಿ ಸೆಟ್ಟೇರಲಿದೆ.