Don't Miss!
- News Bagalkote: ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ: ಮೆರವಣಿಗೆಯಲ್ಲಿ ಕಾಶಪ್ಪನವರ್ ಭರ್ಜರಿ ಡಾನ್ಸ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾಕ್ಟರೇಟ್ ಪಡೆದ ರವಿಚಂದ್ರನ್: ತಪ್ಪುಗಳನ್ನು ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್
ನಟ ರವಿಚಂದ್ರನ್ ರಿಗೆ ಗೌರವ ಡಾಕ್ಟರೇಟ್ ಘೋಷಣೆ ಆಗಿದ್ದು, ನಿನ್ನೆ (ನವೆಂಬರ್ 3) ಅದನ್ನು ಪ್ರಧಾನ ಮಾಡಲಾಯಿತು. ಬೆಂಗಳೂರಿನ ಸಿ ಎಂ ಆರ್ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿತು.
ಬೆಂಗಳೂರಿನ ಕುಂದಲಹಳ್ಳಿಯ ಸಿ ಎಂ ಆರ್ ಕಾಲೇಜಿನ ಆವರಣದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ರವಿಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್, ಕಾಲೇಜಿನ ವಿದ್ಯಾರ್ಥಿಗಳು ಈ ಸಂಭ್ರಮದ ಕ್ಷಣದಲ್ಲಿ ಭಾಗಿಯಾಗಿದ್ದರು. ರವಿಚಂದ್ರನ್ ಕಂಡು ವಿದ್ಯಾರ್ಥಿಗಳು ಖುಷಿಯಾದರು.
ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಟ ರವಿಚಂದ್ರನ್
ಡಾಕ್ಟರೇಟ್ ಪಡೆದ ಸಂತಸದಲ್ಲಿ ಮಾತನಾಡಿದ ರವಿಚಂದ್ರನ್, ತಮ್ಮನ್ನು ಗುರುತಿಸಿ ಡಾಕ್ಟರೇಟ್ ನೀಡಿದ ಸಿ ಎಂ ಆರ್ ವಿಶ್ವವಿದ್ಯಾನಿಲಯಕ್ಕೆ ಧನ್ಯವಾದ ಹೇಳಿದರು. ''ಇನ್ನು ಮುಂದೆ ಹೊಸ ದಾರಿಯಲ್ಲಿ ಸಾಗುತ್ತೇನೆ, ಹಳೆ ದಾರಿಯನ್ನು ಸರಿ ಮಾಡಿಕೊಳ್ಳುವ ಹಾಗೆ ನಡೆಯುತ್ತೇನೆ'' ಎಂದರು.
ಈ ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರ ಇಡೀ ಕುಟುಂಬ ಭಾಗಿಯಾಗಿತ್ತು. ಪತ್ನಿ ಸುಮತಿ, ಮಕ್ಕಳಾದ ಮನೋರಂಜನ್, ವಿಕ್ರಂ, ಗೀತಾಂಜಲಿ ಹಾಗೂ ಅಳಿಯ ಅಜಯ್ ರವಿಚಂದ್ರನ್ ಜೊತೆಗೆ ಇದ್ದರು.
ಅಂದಹಾಗೆ, ನಿರ್ಮಾಪಕ ವೀರಾಸ್ವಾಮಿ ಪುತ್ರ ರವಿಚಂದ್ರನ್ 1971ರಲ್ಲಿ ಬಾಲನಟನಾಗಿ 'ಕುಲ ಗೌರವ' ಸಿನಿಮಾದಲ್ಲಿ ನಟಿಸಿದರು. ನಂತರ 1982ರಲ್ಲಿ 'ಕದೀಮ ಕಳ್ಳರು' ಸಿನಿಮಾದ ನಿರ್ಮಾಣ ಮಾಡಿ ಒಂದು ಪಾತ್ರವನ್ನು ನಿರ್ವಹಿಸಿದರು. 'ಪ್ರೇಮಲೋಕ' ಚಿತ್ರದ ಮೂಲಕ ನಿರ್ದೇಶನ ಶುರು ಮಾಡಿ, ದೊಡ್ಡ ಹಿಟ್ ನೀಡಿದರು. ಅಲ್ಲಿಂದ ಶುರುವಾದ ರವಿಚಂದ್ರನ್ ಪ್ರಯಾಣ ಇಂದಿಗೂ ಮುಂದುವರೆದಿದೆ.
ರವಿಚಂದ್ರನ್ ತಂದೆ ನೆನೆದು ಕಣ್ಣೀರು ಹಾಕಿದ ದ್ವಾರಕೀಶ್
ನಟ, ನಿರ್ದೇಶಕ, ನಿರ್ಮಾಪಕ, ಗೀತಾರಚನೆಗಾರ, ಸಂಗೀತ ನಿರ್ದೇಶಕ, ಸಂಭಾಷಣೆಕಾರನಾಗಿ ರವಿಚಂದ್ರನ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಸದ್ಯ 'ಆ ದೃಶ್ಯ', 'ರಾಜೇಂದ್ರ ಪೊನ್ನಪ್ಪ', 'ರವಿ ಬೊಪ್ಪಣ್ಣ' ಸಿನಿಮಾಗಳಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ.