Don't Miss!
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Technology
ಶೀಘ್ರದಲ್ಲೇ ವಾಟ್ಸಾಪ್ ಸೇರಲಿದೆ ಅತಿ ಉಪಯುಕ್ತ ಫೀಚರ್ಸ್! ವಿಶೇಷತೆ ಏನು?
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Lifestyle
Weekly Horoscope: ಜುಲೈ 3ರಿಂದ ಜುಲೈ 9ರ ವಾರ ಭವಿಷ್ಯ: ಮೇಷ, ಮಿಥುನ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯಬಹುದು
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ದರ್ಶನ್ ಜೊತೆ ರವಿಚಂದ್ರನ್: ಕ್ರಾಂತಿಗೆ ಹೊಸ ಕಾಂತಿ!
'ರಾಬರ್ಟ್' ಸಿನಿಮಾದ ಯಶಸ್ಸಿನ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈಗೆತ್ತಿಕೊಂಡಿರುವ ಚಿತ್ರ 'ಕ್ರಾಂತಿ'. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಈ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ. 'ಯಜಮಾನ' ಚಿತ್ರದ ನಿರ್ಮಾಪಕಿ ಶೈಲಾಜ ನಾಗ್ 'ಕ್ರಾಂತಿ' ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಇದು ದರ್ಶನ್ ಅವರ 55ನೇ ಸಿನಿಮಾ ಎನ್ನುವುದು ವಿಶೇಷ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ದೊಡ್ಡ ಮಟ್ಟದಲ್ಲಿ ಟ್ರೆಂಡ್ ಹುಟ್ಟು ಹಾಕಿದೆ. ದರ್ಶನ್ ಅವರು ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕನ್ನಡ
ನಟರ
ಟ್ರೋಲ್:
ಯಶ್
ಅಭಿಮಾನಿಗಳು
ಮಾಡ್ತಿರೋದು
ಸರಿಯೇ?
ಕ್ರಾಂತಿ ಸಿನಿಮಾದಲ್ಲಿ ಹಲವು ಹೆಸರಾಂತ ಕಲಾವಿದರು ಅಭಿನಯಿಸುತ್ತಾ ಇದ್ದಾರೆ. ಕ್ರಾಂತಿಯ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಕ್ರಾಂತಿ ಸಿನಿಮಾ ಸೆಟ್ನಲ್ಲಿ ಪ್ರತ್ಯಕ್ಷವಾಗಿದ್ದಾರೆ. ದರ್ಶನ್ ಮತ್ತು ರವಿಚಂದ್ರನ್ ಫೋಟೊ ಸದ್ಯ ಎಲ್ಲೆಡೆ ವೈರಲ್ ಆಗಿದೆ.

ಕ್ರಾಂತಿಯಲ್ಲಿ ದರ್ಶನ್ ಜೊತೆಗೆ ರವಿಚಂದ್ರನ್!
ಕ್ರಾಂತಿ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ದೊಡ್ಡ ದೊಡ್ಡ ಕಲಾವಿದರು ಚಿತ್ರದಲ್ಲಿ ಇದ್ದಾರೆ. ಅದರಲ್ಲಿ ನಟ ರವಿಚಂದ್ರನ್ ಕೂಡ ಇದ್ದಾರೆ. ಕ್ರಾಂತಿ ಬಳಗ ಸೇರಿದ್ದಾರೆ ನಟ ರವಿಚಂದ್ರನ್. ಸೆಟ್ನಲ್ಲಿ ರವಿಚಂದ್ರನ್ ಮತ್ತು ದರ್ಶನ್ ಒಟ್ಟಿಗೆ ತೆಗೆಸಿಕೊಂಡಿರುವ ಫೋಟೊ ವೈರಲ್ ಆಗಿದೆ. ಇವರ ಜೊತೆಗೆ ಫೋಟೋದಲ್ಲಿ ನಿರ್ಮಾಪಕ ಸುಪ್ರಿತ್ ಕೂಡ ಕಾಣಿಸಿಕೊಂಡಿದ್ದಾರೆ.
ದರ್ಶನ್
ಜೊತೆಗೆ
ಇಟ್ಟ
ಮೊದಲ
ಹೆಜ್ಜೆ
ನೆನೆದ
'ಬುಲ್
ಬುಲ್'
ರಚಿತಾ
ರಾಮ್!

ಕ್ರಾಂತಿ ಚಿತ್ರದಲ್ಲಿನ ರವಿಚಂದ್ರನ್ ಲುಕ್ ರಿವೀಲ್!
ನಟ ರವಿಚಂದ್ರನ್ ಕ್ರಾಂತಿ ಚಿತ್ರದಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಲುಕ್ ರಿವೀಲ್ ಆಗಿದೆ. ವೈರಲ್ ಫೋಟೋದಲ್ಲಿ ನಟ ರವಿಚಂದ್ರನ್ ಪಂಚೆ, ಶರ್ಟು ತೊಟ್ಟು, ಕೊರಳಲ್ಲಿ ರುದ್ರಾಕ್ಷಿ ಧರಿಸಿದ್ದಾರೆ. ಹಾಗಾಗಿ ಕ್ರಾಂತಿ ಚಿತ್ರದಲ್ಲಿ ದರ್ಶನ್ ಅವರ ಅಪ್ಪ ಅಥವಾ ಅಣ್ಣನ ಪಾತ್ರದಲ್ಲಿ ರವಿಚಂದ್ರನ್ ಅಭಿನಯಿಸಿರಬಹುದು. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಬೇಕಿದೆ.

ಇತ್ತೀಚೆಗೆ ಅಭಿರಾಮಿ 'ಕ್ರಾಂತಿ' ಚಿತ್ರತಂಡ ಸೇರಿದ್ದಾರೆ!
ಇತ್ತೀಗೆ ನಟಿ ಅಭಿರಾಮಿ 'ಕ್ರಾಂತಿ' ಚಿತ್ರದ ಸೆಟ್ನಲ್ಲಿ ಪ್ರತ್ಯಕ್ಷವಾಗಿದ್ದರು. ದರ್ಶನ್ ಜೊತೆಗಿನ ಫೋಟೋವನ್ನು ಅಭಿರಾಮಿ ಹಂಚಿಕೊಂಡಿದ್ದರು. ನಟಿ ಅಭಿರಾಮಿ 'ಕ್ರಾಂತಿ' ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಈ ಹಿಂದೆ ನಟ ದರ್ಶನ್ ಜೊತೆಗೆ ಲಾಲಿ ಹಾಡು ಚಿತ್ರದಲ್ಲಿ ಅಭಿರಾಮಿ ಕಾಣಿಸಿಕೊಂಡಿದ್ದರು. ಈಗ ಎರಡು ದಶಕಗಳ ಬಳಿಕ ಅಭಿರಾಮಿ ದರ್ಶನ್ ಜೊತೆಗೆ ಮತ್ತೆ ಸಿನಿಮಾ ಮಾಡುತ್ತಿದ್ದಾರೆ ಎನ್ನು ಚರ್ಚೆ ಹುಟ್ಟಿದೆ.
'ಕ್ರಾಂತಿ'ಯಲ್ಲಿ
ಅಭಿನಯ,
ಅಭಿರಾಮಿ
ಮಾತು:
ದರ್ಶನ್
ಭೇಟಿಯ
ಕಾರಣ
ಇಲ್ಲಿದೆ

'ರಾಜವೀರ ಮದಕರಿ ನಾಯಕ' ಜಾಗಕ್ಕೆ 'ಕ್ರಾಂತಿ' ಎಂಟ್ರಿ!
ದರ್ಶನ್ ನಟನೆಯ ಈ ಹಿಂದಿನ ಸಿನಿಮಾ 'ರಾಬರ್ಟ್' ದೊಡ್ಡ ಯಶಸ್ಸು ಗಳಿಸಿದೆ. ಅದಾದ ಬಳಿಕ 'ರಾಜವೀರ ಮದಕರಿ ನಾಯಕ' ಸಿನಿಮಾದ ಚಿತ್ರೀಕರಣ ಆರಂಭಿಸಿದ್ದರು ದರ್ಶನ್. ಆದರೆ ಆ ಸಿನಿಮಾದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. 'ರಾಜವೀರ ಮದಕರಿ ನಾಯಕ' ಸಿನಿಮಾವನ್ನು ಹಿರಿಯ ನಿರ್ದೇಶಕ ರಾಜೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದು, ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಹಾಗಾಗಿ ಈಗ ಕ್ರಾಂತಿ ಸಿನಿಮಾವನ್ನು ದರ್ಶನ್ ಆರಂಭಿಸಿದ್ದು, ಶೂಟಿಂಗ್ನಲ್ಲಿ ಬ್ಯೂಸಿ ಆಗಿದ್ದಾರೆ.