Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಕ್ಷಮೆ ಕೋರಿದ ಕನಸುಗಾರ ರವಿಚಂದ್ರನ್
ಚಿತ್ರದ 75% ಚಿತ್ರೀಕರಣ ಮುಗಿದಿದೆ. ಮೊದಲ 15ನಿಮಿಷ ಯಾವ ರೀತಿಯಲ್ಲಿ ತೆರೆಗೆ ತರುವುದು ಎನ್ನುವ ವಿಚಾರದಲ್ಲಿ ಗೊಂದಲದಲ್ಲಿದ್ದೇನೆ. ಗ್ರಾಫಿಕ್ಸ್ ಕೆಲಸಗಳು ಹೆಚ್ಚುಕಮ್ಮಿ ಮುಗಿದಿವೆ. ಇಷ್ಟುದಿನ ಕಾದಿದಕ್ಕೂ ಎಲ್ಲರೂ ಒಪ್ಪಿಕೊಳ್ಳುವಂತ ಚಿತ್ರ ನೀಡುತ್ತೇನೆ ಎಂದು ರವಿಚಂದ್ರನ್ ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಪ್ರೆಮಲೋಕದಂತಹ ಚಿತ್ರದಿಂದ ಇಂದಿಗೂ ಅಭಿಮಾನಿಗಳು ನನ್ನನ್ನು ಗುರುತಿಸುತ್ತಿದ್ದಾರೆ. ನಾನು ನಿರ್ಮಿಸುವ ಚಿತ್ರಗಳು ವಿಭಿನ್ನವಾಗಿರುತ್ತದೆ, ಕೊಟ್ಟ ಕಾಸಿಗೆ ಮೋಸವಿಲ್ಲ ಎಂದು ಜನ ನನ್ನ ಮೇಲೆ ಭರವಸೆ ಇಟ್ಟಿದ್ದಾರೆ. ನಾನು ಚಿತ್ರ ನಿರ್ಮಿಸುವಾಗ ಒಬ್ಬ ಕಲಾವಿದನಾಗಿ ನನಗೆ ಆತ್ಮಸಂತಸ ಸಿಕ್ಕದರೆ ಮಾತ್ರ ಮುಂದುವರಿಸುತ್ತೇನೆ. ಇಲ್ಲಾಂದ್ರೆ ದುಡ್ಡಿನ ಮುಲಾಜು ನೋಡದೆ ಮತ್ತೆ ಚಿತ್ರೀಕರಿಸುತ್ತೇನೆ ಎಂದಿದ್ದಾರೆ.
ಸುಮಾರು 25 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಇನ್ನು ಒಳ್ಳೆ ಒಳ್ಳೆ ತಾಂತ್ರಿಕವಾಗಿ ಶ್ರೀಮಂತವಾಗಿರುವ ಚಿತ್ರವನ್ನು ನೀಡಬೇಕೆಂದಿದ್ದೇನೆ. ನನಗೆ ಸಿನಿಮಾ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ನನ್ನ ಮಗನನ್ನು ಸದ್ಯದಲ್ಲೇ ಚಿತ್ರಂಗಕ್ಕೆ ಪರಿಚಯಿಸುತ್ತೇನೆ. ನನ್ನನ್ನು ಪ್ರೋತ್ಸಾಹಿಸಿ ಬೆಳೆಸಿದಂತೆ ನನ್ನ ಮಗನಿಗೂ ಆಶೀರ್ವಾದ ಮಾಡುತ್ತೀರಾ ಎಂದು ಅಂದುಕೊಂಡಿದ್ದೇನೆ ಎಂದು ರವಿಚಂದ್ರನ್ ಹೇಳಿದ್ದಾರೆ.