Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಶ್ ವರ್ಷದ ಪುಣ್ಯ ತಿಥಿ: ಅಭಿಮಾನಿಗಳಿಗೆ ಅಂಬಿ ಕುಟುಂಬದ ಆಹ್ವಾನ
ರೆಬಲ್ ಸ್ಟಾರ್ ಅಂಬರೀಶ್ ನಿಧನ ಹೊಂದಿ ಒಂದು ವರ್ಷ ಆಗುತ್ತಾ ಬಂತು. ಇದೇ ತಿಂಗಳು 24ಕ್ಕೆ ಮಂಡ್ಯದ ಗಂಡು ಅಂಬರೀಶ್, ಕುಟುಂಬದವರು, ಸ್ನೇಹಿತರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿ ಒಂದು ವರ್ಷವಾಗುತ್ತಿದೆ. ಅಂಬರೀಶ್ ವರ್ಷದ ಪುಣ್ಯತಿಥಿಗೆ ಕುಟುಂಬದವರು ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ.
ಇದೆ ತಿಂಗಳು 14ಕ್ಕೆ ಅಂದರೆ ನಾಳೆ ಅಂಬರೀಶ್ ವರ್ಷದ ಪುಣ್ಯ ತಿಥಿಯನ್ನು ಆಚರಿಸಲು ಕುಟುಂಬದವರು ನಿರ್ಧರಿಸಿದ್ದಾರೆ. ನವೆಂಬರ್ 14 ಗುರುವಾರ ವರ್ಷದ ಪುಣ್ಯತಿಥಿಗೆ ಒಳ್ಳೆಯದಿನವಾದ ಕಾರಣ 10 ದಿನಗಳ ಮುಂಚಿತವಾಗಿಯೆ ಪುಣ್ಯಕಾರ್ಯ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಕುಟುಂಬದ ಜೊತೆಗೆ ಚಿತ್ರರಂಗದ ಗಣ್ಯರು, ಸ್ನೇಹಿತರು ಭಾಗಿಯಾಗಲಿದ್ದಾರೆ.
ಅಂಬಿ ಮೀಸೆ ಮೇಲೆ ಕೈಯಿಟ್ಟ ಯಶ್ ಮಗಳು: ಫೋಟೋ ವೈರಲ್
ಪುಣ್ಯ ತಿಥಿ ಕಾರ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಗೇಟ್ ನಂ.4 ವೃಕ್ಷಹಾಲ್, ಗಾಯತ್ರಿ ವಿಹಾರ್ ನಲ್ಲಿ ನಡೆಯಲಿದೆ. ಈಗಾಗಲೆ ಪುಣ್ಯಕಾರ್ಯಕ್ಕೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ.
"ಸ್ನೇಹ ಜೀವಿ ಸ್ಮರಣಾರ್ಥ ಆಮಂತ್ರಣ ಸ್ನೇಹ ಸಾಗರ, ಪ್ರೀತಿ ಅಜರಾಮರ ಎನ್ನುವುದನ್ನು ಜಗತ್ತಿಗೆ ಸಾರಿದವರು ಈ ಮಣ್ಣಿನ ಹೆಮ್ಮೆಯ ಕುವರ ರೆಬಲ್ ಸ್ಟಾರ್ ಡಾ.ಅಂಬರೀಶ್ ರವರ ಸ್ಮರಣೀಯ ದಿನ. ಅವರ ಹೃದಯವಾಸಿಗಳಾದ ನಿಮ್ಮೆಲ್ಲರಿಗೂ ಆತ್ಮೀಯ ಆಹ್ವಾನ" ಎಂದು ಬರೆದು ಎಲ್ಲರಿಗೂ ಆಹ್ವಾನ ನೀಡಲಾಗಿದೆ.