Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಕಲ್ ರವಿ ಶೂಟೌಟ್ ಪ್ರಕರಣ: ಸಿಸಿಬಿ ಕಚೇರಿಗೆ ಬಂದ ಸಾಧುಕೋಕಿಲಾ
ರೌಡಿ ಶೀಟರ್ ಸೈಕಲ್ ರವಿ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಕಲ್ ರವಿ ಜೊತೆ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ನಂಟು ಹೊಂದಿದ್ದಾರೆ ಎಂಬ ಸುದ್ದಿ ಹಿನ್ನೆಲೆ ಸಾಧುಕೋಕಿಲಾ ಅವರು ಸಿಸಿಬಿ ಕಚೇರಿಗೆ ಸೋಮವಾರ ಭೇಟಿ ನೀಡಿದ್ದರು.
ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ತೆರಳಿದ ಸಾಧು ಕೋಕಿಲ, ಅಲ್ಲಿ ಹಿರಿಯ ಅಧಿಕಾರಿಯನ್ನು ಭೇಟಿ ಮಾಡಿ 'ತಮಗೂ ಸೈಕಲ್ ರವಿಗೂ ಸಂಬಂಧವಿಲ್ಲ. ಆದರೂ ಈ ಪ್ರಕರಣದಲ್ಲಿ ತಮ್ಮ ಹೆಸರು ಏಕೆ ಕೇಳಿಬರುತ್ತಿದೆ' ಎಂದು ವಿವರಿಸಿದ್ದಾರೆ ಎನ್ನಲಾಗಿದೆ.
ಸೈಕಲ್ ರವಿ ಜತೆ ನಂಟು: ಸಿಸಿಬಿಗೆ ಹಾಜರಾದ ಸಾಧು ಕೋಕಿಲ
ಇದಕ್ಕೆ ಪ್ರತಿಕ್ರಿಯಿಸಿದ ಸಿಸಿಬಿ ಅಧಿಕಾರಿ, ಸೈಕಲ್ ರವಿ ಜತೆ ನಿಮಗೆ ಸಂಪರ್ಕವಿದೆ ಎಂದು ನಾವು ಹೇಳಿಕೆ ನೀಡಿಲ್ಲ. ಅದಕ್ಕೆ ಸಾಕ್ಷ್ಯಗಳು ಕೂಡ ಇಲ್ಲ. ವಿಚಾರಣೆಯ ಅಗತ್ಯವಿದ್ದರೆ ನಾವೇ ನಿಮ್ಮನ್ನು ಕರೆಯುತ್ತೇವೆ ಎಂದು ಹೇಳಿ ಅಲ್ಲಿಂದ ಕಳುಹಿಸಿದರು ಎನ್ನಲಾಗಿದೆ. ಇನ್ನು ಕಚೇರಿಯಿಂದ ಹೊರಬಂದ ಸಾಧು ಕೋಕಿಲ, ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.
ರೌಡಿ ಶೀಟರ್ ಸೈಕಲ್ ರವಿ ವಿರುದ್ಧದ ತನಿಖೆ ಇಡಿಗೆ ಹಸ್ತಾಂತರ
ಸೈಕಲ್ ರವಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಪರಾಜಿತ ಅಭ್ಯರ್ಥಿ ಅಲ್ತಾಫ್ ಖಾನ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಘಟನೆಯ
ವಿವರ
ರೌಡಿ
ಶೀಟರ್
ಸೈಕಲ್
ರವಿಯನ್ನು
ಜೂನ್
27ರಂದು
ರಾಜರಾಜೇಶ್ವರಿ
ನಗರದ
ನೈಸ್
ರೋಡ್
ಸಮೀಪ
ಬಂಧಿಸಲು
ಹೋದಾಗ
ಆತ,
ಪೊಲೀಸ್
ಕಾನ್ಸ್ಟೆಬಲ್
ಸತೀಶ್
ಮೇಲೆ
ಹಲ್ಲೆಗೆ
ಯತ್ನಿಸಿದ್ದ.
ಆಗ ಸಿಸಿಬಿ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ಪಿಐ ಮಲ್ಲಿಕಾರ್ಜುನ್ ಎರಡು ಸುತ್ತು ಗುಂಡುಹಾರಿಸಿ ಅವನನ್ನು ವಶಕ್ಕೆ ಪಡೆದುಕೊಂಡಿದ್ದರು. ಸೈಕಲ್ ರವಿಯೊಂದಿಗೆ ರಾಜಕಾರಣಿಗಳು ಮತ್ತು ಸಿನಿಮಾರಂಗದ ಅನೇಕರು ನಂಟು ಇರಿಸಿಕೊಂಡಿದ್ದರು ಎಂಬ ಆರೋಪಗಳು ಕೇಳಿಬಂದಿವೆ.