Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಯಿ ಕುಮಾರ್ ತಾಯಿಯ ಕನಸು ನನಸು ಮಾಡಿದ ಚೇತನ್ ಕುಮಾರ್
''ನಾವು ಮೂರು ಜನ ಇವತ್ತು ಈ ವೇದಿಕೆ ಮೇಲೆ ನಿಂತಿದ್ದೇವೆ ಅಂದರೆ, ಅದಕ್ಕೆ ಕಾರಣ ಕರ್ನಾಟಕ. ಕರ್ನಾಟಕ ಇಲ್ಲ ಅಂದ್ರೆ...'' ಈ ರೀತಿ ಹೇಳಿರುವುದು, ಬಹುಭಾಷ ನಟ ಸಾಯಿ ಕುಮಾರ್.
ನಟ ಸಾಯಿ ಕುಮಾರ್ ಕನ್ನಡ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಇದೀಗ 'ಭರಾಟೆ' ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಮೂಲಕ ನಟ ಸಾಯಿ ಕುಮಾರ್ ತಾಯಿಯ ಕನಸು ನನಸಾಗಿದೆ.
ಚೇತನ್ ಸಿನಿಮಾ ಬರ್ತಿದೆ ಅಂದ್ರೆ ಡೇಂಜರ್ ಬೋರ್ಡ್ ನೋಡಿದ ಹಾಗೆ ಆಗುತ್ತೆ - ತರುಣ್
'ಭರಾಟೆ' ಸಿನಿಮಾದ ಆಕ್ಷನ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಯಿ ಕುಮಾರ್, ತಮ್ಮ ಹಾಗೂ ತಮ್ಮ ಸಹೋದರರ ಸಿನಿ ಜರ್ನಿಯನ್ನು ನೆನೆದರು. ಅಗ್ನಿ, ಆರುಮುಘಂ ಹಾಗೂ ಆಯುಧ ಆಗಿ ಕನ್ನಡ ಚಿತ್ರರಂಗಕ್ಕೆ ಬಂದ ಸಾಯಿ ಕುಮಾರ್ ಸಹೋದರರು ಇಂದು ದೊಡ್ಡ ನಟರಾಗಿ ಬೆಳೆದಿದ್ದಾರೆ. ಇದರ ಜೊತೆಗೆ ಅವರ ತಾಯಿಯ ಕನಸು ಕೂಡ ಈಡೇರಿದೆ.
ಒಂದೇ ಚಿತ್ರದಲ್ಲಿ ಮೂರು ಮಕ್ಕಳನ್ನು ನೋಡಬೇಕು
ತಮ್ಮ ಮೂವರು ಮಕ್ಕಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎನ್ನುವುದು ನಟ ಸಾಯಿ ಕುಮಾರ್ ತಾಯಿಯ ಆಸೆಯಾಗಿತ್ತು. ಈ ಆಸೆ ಬಹಳ ವರ್ಷಗಳ ನಂತರ ಇದೀಗ ಈಡೇರಿದೆ. ಇಷ್ಟು ದಿನ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇದ್ದ ಸಾಯಿ ಕುಮಾರ್, ರವಿಶಂಕರ್ ಹಾಗೂ ಅಯ್ಯಪ್ಪ 'ಭರಾಟೆ' ಸಿನಿಮಾದಲ್ಲಿ ಮೊದಲ ಬಾರಿಗೆ ಒಂದಾಗಿದ್ದಾರೆ.
ಸಾಯಿ ಕುಮಾರ್ ತಾಯಿಯ ಆಸೆ ಈಡೇರಿಸಿದ ಚೇತನ್
ಸಾಯಿ ಕುಮಾರ್ ಆಸೆಯನ್ನು ನಿರ್ದೇಶಕ ಚೇತನ್ ಕುಮಾರ್ 'ಭರಾಟೆ' ಚಿತ್ರದಿಂದ ನನಸು ಮಾಡಿದ್ದಾರೆ. 'ಭರಾಟೆ' ಚಿತ್ರದಲ್ಲಿ ರವಿಶಂಕರ್ ಪಲ್ಲವ, ಅಯ್ಯಪ್ಪ ವೀರಪ್ಪ ನಾಯಕ ಹಾಗೂ ಸಾಯಿ ಕುಮಾರ್ ಬಲ್ಲಾಳ ದೇವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಬಂದ ಆಕ್ಷನ್ ಟ್ರೇಲರ್ ನಲ್ಲಿ ಸಹೋದರರ ಅಬ್ಬರ ಜೋರಾಗಿದೆ.
ಭರಾಟೆ ಚಿತ್ರದ 'ಆಕ್ಷನ್ ಟ್ರೈಲರ್' ರಿಲೀಸ್ ಮಾಡುವ ನಟರು ಮತ್ತು ನಿರ್ಮಾಪಕರು ಇವರೆ
ಕನ್ನಡ ನಮ್ಮ ಜೀವನದ ಭಾಷೆ
''ನಮ್ಮ ಮಾತೃ ಭಾಷೆ ತೆಲುಗು ಆಗಿದ್ದರೂ, ಜೀವನದ ಭಾಷೆ ಕನ್ನಡ. ನಮ್ಮ ಮೂವರನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎನ್ನುವುದು ಅಮ್ಮನ ಆಸೆ. ಆದರೆ, ಅಮ್ಮ ಇಂದು ನಮ್ಮ ಜೊತೆಗೆ ಇಲ್ಲ. ಕರ್ನಾಟಕದ ಜನ ಈ ಸಿನಿಮಾವನ್ನು ನೋಡಿದರೆ ಅಮ್ಮ ನೋಡಿದ ಹಾಗೆ.'' ಎಂದು ನಟ ರವಿಶಂಕರ್ ಮಾತನಾಡಿದರು.
ಚೇತನ್, ಶ್ರೀಮುರಳಿ ಸುಪ್ರೀತ್ ಗೆ ಧನ್ಯವಾದ
ಸಿನಿಮಾದ ನಾಯಕ ಶ್ರೀಮುರಳಿ, ನಿರ್ದೇಶಕ ಚೇತನ್ ಕುಮಾರ್ ಹಾಗೂ ನಿರ್ಮಾಪಕ ಸುಪ್ರೀತ್ ಮೂವರಿಗೂ, ಸಾಯಿ ಕುಮಾರ್ ಹಾಗೂ ಸಹೋದರರು ಧನ್ಯವಾದ ತಿಳಿಸಿದರು. ಅಂದಹಾಗೆ, 'ಭರಾಟೆ' ಸಿನಿಮಾ ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆ ಆಗುತ್ತಿದೆ. 'ಬಹದ್ದೂರ್', 'ಭರ್ಜರಿ' ನಂತರ ಬರುತ್ತಿರುವ ನಿರ್ದೇಶಕ ಚೇತನ್ ಅವರ ಮೂರನೇ ಚಿತ್ರವಾಗಿದೆ.