Don't Miss!
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಸಿನಿ ಕಾರ್ಮಿಕರ ನೆರವಿಗೆ ನಿಂತ ಸಾಯಿ ಕುಮಾರ್ ಸಹೋದರರು
ಕೊರೊನಾ ಎರಡನೇ ಅಲೆ ಭೀಕರ ಪರಿಸ್ಥಿತಿ ಎದುರಿಸಲು ಸಾಕಷ್ಟು ಮಂದಿ ನೆರವಿಗೆ ನಿಂತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೊರೊನಾ ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಅನೇಕ ಮಂದಿಗೆ ಸಿನಿ ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚಿದ್ದಾರೆ.
ಕೊರೊನಾ ಲಾಕ್ ಡೌನ್ನಿಂದ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದೆ. ಸಿನಿ ಕಾರ್ಮಿಕರ ಬದುಕು ಕಷ್ಟದಲ್ಲಿದೆ. ಕೆಲಸವಿಲ್ಲದೆ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ಅನೇಕ ಸ್ಟಾರ್ ಕಲಾವಿದರು ನೆರವು ನೀಡಿದ್ದಾರೆ. ಸುದೀಪ್, ಉಪೇಂದ್ರ, ಯಶ್, ವಿಜಯ್ ಕಿರಗಂದೂರ್, ಪುನೀತ್ ರಾಜ್ ಕುಮಾರ್, ಸೇರಿದಂತೆ ಅನೇಕ ಮಂದಿ ಸಹಾಯ ಹಸ್ತ ಚಾಚಿದ್ದಾರೆ.
ಒಂದು ಸಿನಿಮಾದಿಂದ ಎಲ್ಲವನ್ನೂ ಕಳೆದುಕೊಂಡಿದ್ದ ಸಾಯಿ ಕುಮಾರ್
ಇದೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಸಹೋದರರು ಕೂಡ ಸಹಾಯಕ್ಕೆ ನಿಂತಿದ್ದಾರೆ. ನಟ ರವಿಶಂಕರ್, ಅಯ್ಯಪ್ಪ ಪಿ ಶರ್ಮಾ ಕೊರೊನಾ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗಿದ್ದಾರೆ. ಕರ್ನಾಟಕ ಚಲನಚಿತ್ರ ಒಕ್ಕೂಟಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಮೂಲತಃ ಕರ್ನಾಟಕದವರಲ್ಲದಿದ್ದರೂ ಕನ್ನಡದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಸಾಯಿಕುಮಾರ್ ಸಹೋದರರು ಕಾರ್ಮಿಕರ ಸಹಾಯಕ್ಕೆ ಬಂದಿರುವ ಮೂಲಕ ಕನ್ನಡಿಗರ ಮೆಚ್ಚುಗೆ ಪಾತ್ರರಾಗಿದ್ದಾರೆ.
ಸಾಯಿಕುಮಾರ್ ಕೊನೆಯದಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ಈ ಸಿನಿಮಾಗೂ ಮೊದಲು ಶ್ರೀಮುರಳಿ ನಟನೆಯ ಭರಾಟೆ ಚಿತ್ರದಲ್ಲಿ ನಟಿಸಿದ್ದರು. ವಿಶೇಷ ಎಂದರೆ ಈ ಸಿನಿಮಾದಲ್ಲಿ ಸಾಯಿಕುಮಾರ್ ಮೂವರು ಸಹೋದರರು ಕೂಡ ನಟಿಸಿದ್ದಾರೆ. ಮೊದಲು ಬಾರಿಗೆ ಸಾಯಿಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಒಂದೇ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಮುಂದೆ ಬಂದಿದ್ದರು.
Recommended Video
ಇನ್ನು ರವಿಶಂಕರ್ ಕೊನೆಯದಾಗಿ ದರ್ಶನ್ ನಟನೆಯ ರಾಬರ್ಟ್ ಚಿತ್ರದಲ್ಲಿ ನಟಿಸಿದ್ದರು. ಸದ್ಯ ಸುದೀಪ್ ನಟನೆಯ ಕೋಟಿಗೊಬ್ಬ-3, ತ್ರಿಬಲ್ ರೈಡಿಂಗ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.