Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಗೇಪಲ್ಲಿಯಿಂದ ಚುನಾವಣೆಗೆ ಸಾಯಿಕುಮಾರ್
ಅವರು ಈ ಬಾರಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲದಿದ್ದರೂ, ಬಹುಶಃ ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿಚ್ಚಳವಾಗಿವೆ. ಜನಾರ್ದನ ರೆಡ್ಡಿ ಅವರೊಂದಿಗೆ ಅವರು ಈ ಬಗ್ಗೆಯೇ ಚರ್ಚಿಸಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಅವರು ಚುನಾವಣೆಯಲ್ಲಿ ಅಲ್ಪಮತದಿಂದ ತಮ್ಮ ಸಮೀಪದ ಸ್ಪರ್ಧಿ ಎನ್ ಸಂಪಂಗಿ (ಕಾಂಗ್ರೆಸ್) ವಿರುದ್ಧ ಸೋತಿದ್ದರು.
ಆದರೆ ಈ ಬಾರಿ ಅವರು ಬಾಗೇಪಲ್ಲಿ ಕ್ಷೇತ್ರದಿಂದಲ್ಲೇ ಸ್ಪರ್ಧಿಸುವುದಾಗಿ ತಿಳಿಸಿದ್ದು, ಯಾವ ಪಕ್ಷದಿಂದ ಸ್ಪರ್ಧಿಸಲಿದ್ದೇನೆ ಎಂಬುದನ್ನು ಶೀಘ್ರದಲ್ಲೇ ವಿವರ ನೀಡುವುದಾಗಿ ತಿಳಿಸಿದ್ದಾರೆ. ರೆಡ್ಡಿ ಅವರನ್ನು ಭೇಟಿಯಾದ ಬಗ್ಗೆ ಅವರು ಮಾತನಾಡಲು ನಿರಾಕರಿಸಿದ್ದಾರೆ.
ಉಪೇಂದ್ರ ಅವರ 'ಕಲ್ಪನ' ಚಿತ್ರದ ಬಳಿಕ ಅವರು ಅಂಗುಲಿಮಾಲ ಎಂಬ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಭಗವಂತ ಎಂಬ ಮತ್ತೊಂದು ಚಿತ್ರಕ್ಕೂ ಸಾಯಿಕುಮಾರ್ ಸಹಿಹಾಕಿದ್ದಾರೆ. (ಏಜೆನ್ಸೀಸ್)