Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ವಿಜಯ್ ಅಪ್ಡೇಟ್: ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ
ನಟ ಸಂಚಾರಿ ವಿಜಯ್ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಅಪೋಲೋ ಆಸ್ಪತ್ರೆ ವೈದ್ಯರು ಇಂದು (ಜೂನ್ 14) ಸುದ್ದಿಗೋಷ್ಠಿ ಮಾಡುವ ಸಾಧ್ಯತೆ ಇದೆ.
Recommended Video
ಬೈಕ್ ಅಪಘಾತದಿಂದ ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ತೀವ್ರ ಪೆಟ್ಟು ಆಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆದರೆ, ವಿಜಯ್ ಅವರಿಗೆ ಪ್ರಜ್ಞೆ ಬಂದಿಲ್ಲ. ಸದ್ಯ, ವಿಜಯ್ ಯಥಾಸ್ಥಿತಿ ಮುಂದುವರಿದಿದ್ದು, ಮತ್ತಷ್ಟು ಸಮಯ ಕಾದು ನೋಡಬೇಕಾಗಿದೆ.
ರಾತ್ರೋರಾತ್ರಿ ವಿಜಯ್ ಆಪರೇಷನ್ಗೆ ವ್ಯವಸ್ಥೆ ಮಾಡಿಸಿದ ಸುದೀಪ್
ಸಂಚಾರಿ ವಿಜಯ್ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ 11 ಗಂಟೆಗೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡುವ ನಿರೀಕ್ಷೆ ಇದೆ. ಭಾನುವಾರ ರಾತ್ರಿ 10.30ಕ್ಕೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿತ್ತು.
ವಿಜಯ್ ಸದ್ಯಕ್ಕೆ ವೆಂಟಿಲೇಟರ್ ಸಹಾಯದಲ್ಲಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಉಸಿರಾಟ ಮತ್ತು ಹೃದಯಬಡಿತದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಪ್ರಜ್ಞೆ ಬಂದ ಕೂಡಲೇ ವಿಜಯ್ ಆರೋಗ್ಯದ ಬಗ್ಗೆ ಸ್ಪಷ್ಟವಾಗಿ ಹೇಳಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ.
ನ್ಯೂರೋ ಸರ್ಜನ್ ಡಾ.ಅರುಣ್ ನಾಯಕ್ ಸಂಚಾರಿ ವಿಜಯ್ಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ತೀವ್ರ ನಿಗಾ ವಹಿಸಿದ್ದಾರೆ.
ಭಾನುವಾರ ಸತೀಶ್ ನೀನಾಸಂ ಮಾತನಾಡಿ, ಸಂಚಾರಿ ವಿಜಯ್ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಪ್ರಜ್ಞೆ ಬರಬೇಕಾಗಿದೆ. ಉಳಿದಂತೆ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರು.