Don't Miss!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Breaking: ಸಂಚಾರಿ ವಿಜಯ್ಗೆ ಅಪಘಾತ, ಐಸಿಯುನಲ್ಲಿ ಚಿಕಿತ್ಸೆ
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಪಘಾತಕ್ಕೆ ಒಳಗಾಗಿದ್ದು, ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
Recommended Video
ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ವಿಜಯ್ ಬಲ ತೊಡೆಗೆ ತೀವ್ರ ಪೆಟ್ಟಾಗಿದೆ. ಜೊತೆಗೆ ಮೆದುಳಿನ ಬಲಭಾಗಕ್ಕೂ ಬಲವಾದ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ.
ಶನಿವಾರ ರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದರು. ಆದರೆ, ಸಂಚಾರಿ ವಿಜಯ್ ಎಲ್ಲಿಗೆ ಹೋಗುತ್ತಿದ್ದರು ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಅಪಘಾತಕ್ಕೆ ಏನು ಕಾರಣ ಏನು ಎನ್ನುವುದು ಸಹ ಸದ್ಯಕ್ಕೆ ಪ್ರಶ್ನೆಯಾಗಿ ಉಳಿದಿದೆ.
ಸದ್ಯ ಸಂಚಾರಿ ವಿಜಯ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ, ವಿಜಯ್ ಅವರಿಗೆ ಗಂಭೀರ ಗಾಯಗಳಾಗಿವೆ, ಆಸ್ಪತ್ರೆ ಬಂದಾಗಲೇ ತೀವ್ರವಾಗಿ ರಕ್ತಸ್ರಾವ ಆಗಿತ್ತು. ಮೆದುಳಿನ ಭಾಗಕ್ಕೆ ಹೆಚ್ಚು ಪೆಟ್ಟು ಬಿದ್ದಿರುವುದರಿಂದ ಅವರು ಪ್ರಜ್ಞಾಹೀನ ಪರಿಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.
ನಿರ್ದೇಶಕ ಲಿಂಗದೇವರು ಟಿವಿ9 ವಾಹಿನಿಗೆ ನೀಡಿರುವ ಮಾಹಿತಿ ಪ್ರಕಾರ, ವಿಜಯ್ ಅವರು ರಾತ್ರಿ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಪರಿಸ್ಥಿತಿ ಅಂತ ವೈದ್ಯರು ಹೇಳ್ತಿದ್ದು, ಕೋಮಾ ಸ್ಥಿತಿ ತಲುಪಿದ್ದಾರೆ. ಸದ್ಯಕ್ಕೆ ಏನೂ ಹೇಳುವ ಪರಿಸ್ಥಿತಿಯಲ್ಲಿ ವೈದ್ಯರು ಇಲ್ಲ ಎಂದು ತಿಳಿಸಿದ್ದಾರೆ.