Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇತ್ರದಾನ ಮಾಡಲು ಮುಂದಾದ ನಟ ಸಂಚಾರಿ ವಿಜಯ್
Recommended Video
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಈಗ 'ಕೃಷ್ಣ ತುಳಸಿ' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದೇ ಪಾತ್ರ ಈಗ ಅವರನ್ನು ನೇತ್ರದಾನ ಮಾಡಲು ಸ್ಪೂರ್ತಿ ನೀಡಿದೆ.
ಸಂಚಾರಿ ವಿಜಯ್ ಈಗ ತಮ್ಮ ಕಣ್ಣುಗಳನ್ನು ದಾನ ಮಾಡಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಒಂದು ಕಾರಣ 'ಕೃಷ್ಣ ತುಳಸಿ' ಸಿನಿಮಾವಾದರೆ ಇನ್ನೊಂದು ಕಡೆ ರಾಜ್ ಕುಮಾರ್ ಅವರಂತೆ. ಅಂದಹಾಗೆ, ಇನ್ನು ಈ ಬಗ್ಗೆ ಮಾತನಾಡಿರುವ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಸಿನಿಮಾ ಮಾಡಿದ ಸಮಯದಲ್ಲಿ ಮಂಗಳಮುಖಿಯರ ಸಮಸ್ಯೆಗಳು ಅರ್ಥ ಆಯ್ತು. ಅದೇ ರೀತಿ 'ಕೃಷ್ಣ ತುಳಸಿ' ಸಿನಿಮಾ ಮಾಡಿದಾಗ ಅಂಧರ ಕಷ್ಟಗಳು ಅರ್ಥ ಆಯ್ತು ಎಂದು ಹೇಳಿದ್ದಾರೆ.
ಸಿನಿಮಾದಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ ನಲ್ಲಿಯೂ ಸಂಚಾರಿ ವಿಜಯ್ ಹೀರೋ ಆಗಿದ್ದಾರೆ. ತಮ್ಮ ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲಿದ್ದಾರೆ. ಇನ್ನು ಸಂಚಾರಿ ವಿಜಯ್ ನಟನೆಯ 'ಕೃಷ್ಣ ತುಳಸಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾವನ್ನು ಸುಕೇಶ್ ನಾಯಕ್ ನಿರ್ದೇಶನ ಮಾಡಿದ್ದಾರೆ. ಮೇಘಶ್ರೀ ಚಿತ್ರದ ನಾಯಕಿ ಆಗಿದ್ದಾರೆ. ಚಿತ್ರದಲ್ಲಿ ಸಂಚಾರಿ ವಿಜಯ್ ಅಂಧನಾಗಿರುವ ಒಬ್ಬ ಪ್ರವಾಸಿ ಗೈಡ್ ಪಾತ್ರ ಮಾಡಿದ್ದಾರೆ.