Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇತ್ರದಾನ ಮಾಡಲು ಮುಂದಾದ ನಟ ಸಂಚಾರಿ ವಿಜಯ್
Recommended Video
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಈಗ 'ಕೃಷ್ಣ ತುಳಸಿ' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದೇ ಪಾತ್ರ ಈಗ ಅವರನ್ನು ನೇತ್ರದಾನ ಮಾಡಲು ಸ್ಪೂರ್ತಿ ನೀಡಿದೆ.
ಸಂಚಾರಿ ವಿಜಯ್ ಈಗ ತಮ್ಮ ಕಣ್ಣುಗಳನ್ನು ದಾನ ಮಾಡಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಒಂದು ಕಾರಣ 'ಕೃಷ್ಣ ತುಳಸಿ' ಸಿನಿಮಾವಾದರೆ ಇನ್ನೊಂದು ಕಡೆ ರಾಜ್ ಕುಮಾರ್ ಅವರಂತೆ. ಅಂದಹಾಗೆ, ಇನ್ನು ಈ ಬಗ್ಗೆ ಮಾತನಾಡಿರುವ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಸಿನಿಮಾ ಮಾಡಿದ ಸಮಯದಲ್ಲಿ ಮಂಗಳಮುಖಿಯರ ಸಮಸ್ಯೆಗಳು ಅರ್ಥ ಆಯ್ತು. ಅದೇ ರೀತಿ 'ಕೃಷ್ಣ ತುಳಸಿ' ಸಿನಿಮಾ ಮಾಡಿದಾಗ ಅಂಧರ ಕಷ್ಟಗಳು ಅರ್ಥ ಆಯ್ತು ಎಂದು ಹೇಳಿದ್ದಾರೆ.
ಸಿನಿಮಾದಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ ನಲ್ಲಿಯೂ ಸಂಚಾರಿ ವಿಜಯ್ ಹೀರೋ ಆಗಿದ್ದಾರೆ. ತಮ್ಮ ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲಿದ್ದಾರೆ. ಇನ್ನು ಸಂಚಾರಿ ವಿಜಯ್ ನಟನೆಯ 'ಕೃಷ್ಣ ತುಳಸಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾವನ್ನು ಸುಕೇಶ್ ನಾಯಕ್ ನಿರ್ದೇಶನ ಮಾಡಿದ್ದಾರೆ. ಮೇಘಶ್ರೀ ಚಿತ್ರದ ನಾಯಕಿ ಆಗಿದ್ದಾರೆ. ಚಿತ್ರದಲ್ಲಿ ಸಂಚಾರಿ ವಿಜಯ್ ಅಂಧನಾಗಿರುವ ಒಬ್ಬ ಪ್ರವಾಸಿ ಗೈಡ್ ಪಾತ್ರ ಮಾಡಿದ್ದಾರೆ.