Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ ಚಾಲಕರ ಜೊತೆ ಕನ್ನಡ ರಾಜ್ಯೋತ್ಸವ ಆಚರಿಸಿದ ಸತೀಶ್ ನೀನಾಸಂ
ಆಟೋ ಚಾಲಕರು ಹಾಗೂ ಕನ್ನಡ ಸಿನಿಮಾ ಇಂಡಸ್ಟ್ರಿಗೂ ಒಂದು ರೀತಿ ಅವಿನಾಭಾವ ಸಂಬಂಧ. ಸ್ಯಾಂಡಲ್ ವುಡ್ ಚಿತ್ರಗಳನ್ನು ಮೊದಲ ದಿನ ಮೊದಲ ಶೋ ನೋಡುವ ಪ್ರೇಕ್ಷಕರಲ್ಲಿ ಆಟೋ ಚಾಲಕರೇ ಹೆಚ್ಚಿರ್ತಾರೆ ಎನ್ನುವುದನ್ನು ಮರೆಯುವಂತಿಲ್ಲ.
ಶಂಕರ್ ನಾಗ್, ವಿಷ್ಣುವರ್ಧನ್, ದರ್ಶನ್, ಸುದೀಪ್, ಗಣೇಶ್ ಸೇರಿದಂತೆ ಅನೇಕ ಕಲಾವಿದರು ಆಟೋ ಡ್ರೈವರ್ಗಳ ಪಾತ್ರ ಮಾಡಿದ್ದಾರೆ. ಅದೇಷ್ಟೋ ಆಟೋ ಚಾಲಕರ ಪಾಲಿಗೆ ಈ ಕಲಾವಿದರು ಆರಾಧ್ಯ ದೈವವೇ ಆಗಿದ್ದಾರೆ.
ಸತೀಶ್ ನೀನಾಸಂ ವೃತ್ತಿ ಜೀವನದಲ್ಲಿ ಇಂದು ಮರೆಯಲಾಗದ ದಿನ
ಇಂತಹ ಆಟೋ ಚಾಲಕರ ಜೊತೆ ನಟ ಸತೀಶ್ ನೀನಾಸಂ ಅವರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದಾರೆ. ಪೀಸ್ ಆಟೋ ಸಂಘದ ವತಿಯಿಂದ ಆಯೋಜಿಸಲಾಗಿದ್ದ, ಆಟೋ ಚಾಲಕರ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸತೀಶ್ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.
ಈ ಕುರಿತು ಟ್ವಿಟ್ಟರ್ನಲ್ಲಿ ಸಂತಸ ಹಂಚಿಕೊಂಡಿರುವ ಸತೀಶ್ ''ನಮ್ಮ ಆಟೋ ಚಾಲಕರಿಂದ ಕನ್ನಡದ ಸಿನಿಮಾ, ಭಾಷೆ, ಎಲ್ಲದಕ್ಕು ದೊಡ್ಡ ಕೊಡುಗೆ ಇದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನ್ನ ಅತ್ಯಂತ ಸಂತಸದ ಕ್ಷಣ, ಜೈ ಕರ್ನಾಟಕ. ಜೈ ಆಟೋ ಚಾಲಕ...'' ಎಂದು ವಿಡಿಯೋ ಹಂಚಿಕೊಂಡಿದ್ದಾರೆ.
Recommended Video
ಅಂದ್ಹಾಗೆ, ಸತೀಶ್ ನೀನಾಸಂ ಅವರು ಸತತ ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ. ಸದ್ಯ, ಪೆಟ್ರೋಮ್ಯಾಕ್ಸ್, ದಸರಾ ಹಾಗೂ ಮ್ಯಾಟ್ನಿ ಎಂಬ ಚಿತ್ರಗಳಲ್ಲಿ ನಟಿಸುತ್ತಿದ್ದು, ಈ ಮೂರು ಸಿನಿಮಾ ಚಿತ್ರೀಕರಣ ಮಾಡ್ತಿವೆ.