Don't Miss!
- Finance ಎರಡು ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ, 144 ಸೆಕ್ಷನ್ ಜಾರಿ, ದಿನಾಂಕ ವಿವರ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- News ₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಂದು ರೀಮೇಕ್ ಚಿತ್ರಕ್ಕೆ ಶರಣ್ ನಾಯಕ.!
ಸ್ಯಾಂಡಲ್ ವುಡ್ ಸ್ಟಾರ್ ನಟ ಶರಣ್ ಸಿಕ್ಕಾಪಟ್ಟೆ ಬ್ಯುಸಿ ಇದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳು ಮೂಲಕ ಕನ್ನಡ ಪ್ರೇಕ್ಷಕರನ್ನ ರಂಜಿಸುತ್ತಿದ್ದಾರೆ. ಸದ್ಯ, ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ 'ರಾಜ್-ವಿಷ್ಣು' ಚಿತ್ರ ಬಿಡುಗಡೆಗೆ ಸಿದ್ದವಾಗುತ್ತಿದೆ. ಈ ಮಧ್ಯೆ ಮತ್ತೊಂದು ರೀಮೇಕ್ ಚಿತ್ರಕ್ಕೆ ಶರಣ್ ನಾಯಕರಾಗುತ್ತಿದ್ದಾರೆ.
ಹೌದು, 'ವಜ್ರಕಾಯ', 'ಚಿಂಗಾರಿ', 'ಭಜರಂಗಿ', 'ಬಿರುಗಾಳಿ' ಅಂತಹ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಯೋಗಾನಂದ್ ಮುದ್ದಾನ್ ಈಗ ನಿರ್ದೇಶಕರಾಗುತ್ತಿದ್ದು, ಇವರ ಮುಂದಿನ ಚಿತ್ರದಲ್ಲಿ ಶರಣ್ ನಾಯಕರಾಗುತ್ತಿದ್ದಾರಂತೆ.
ಅಂದ್ಹಾಗೆ, ಈ ಚಿತ್ರ ತೆಲುಗಿನ ರೀಮೇಕ್ ಆಗಿದ್ದು, ಯಾವ ಚಿತ್ರ ಎಂಬ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ತೆಲುಗು ನಿರ್ಮಾಪಕರೇ ಬಂಡವಾಳ ಹಾಕುತ್ತಿದ್ದು, ಕರ್ನಾಟಕ ಹಾಗೂ ಅಮೆರಿಕಾದಲ್ಲಿ ಚಿತ್ರೀಕರಣ ನಡೆಯಲಿದೆಯಂತೆ.
ಇನ್ನು ವಿ.ಹರಿಕೃಷ್ಣ ಸಂಗೀತ ನೀಡಲಿದ್ದು, ಕೆ.ಎಂ ಪ್ರಕಾಶ್ ಸಂಕಲನಕಾರರಾಗಿ ಕೆಲಸ ಮಾಡಲಿದ್ದಾರೆ. ಸದ್ಯ, ಪ್ರಿ-ಪ್ರೊಡಕ್ಷನ್ ಕೆಲಸಗಳನ್ನ ಮುಗಿಸಿರುವ ಚಿತ್ರತಂಡ, ಜುಲೈ ಅಂತ್ಯಕ್ಕೆ ಸಿನಿಮಾ ಶುರು ಮಾಡುವ ಯೋಚನೆಯಲ್ಲಿದೆಯಂತೆ.