Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮ್ಮನ ಆರೋಗ್ಯ ಸ್ಥಿತಿ ವಿವರಿಸಿದ ನಟ ಶಿವರಾಜ್ ಕುಮಾರ್
ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಉಸಿರಾಟದ ತೊಂದರೆಯಾಗಿದ್ದು ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದ್ರೆ, ಯಾವುದೇ ಆತಂಕ ಪಡುವಂತಿಲ್ಲ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಸ್ಪಷ್ಟಡಿಸಿದ್ದಾರೆ.
ಮತ್ತೊಂದೆಡೆ ಡಾ.ರಾಜ್ ಕುಟುಂಬದ ಸದಸ್ಯರೆಲ್ಲಾ ಆಸ್ಪತ್ರೆಗೆ ಆಗಮಿಸಿದ್ದಾರೆ. ಇದು ಅಭಿಮಾನಿಗಳಿಗೆ ಆತಂಕ ಉಂಟು ಮಾಡಿತ್ತು. ತದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಶಿವರಾಜ್ ಕುಮಾರ್, ಅಮ್ಮನ ಆರೋಗ್ಯದ ಬಗ್ಗೆ ತಿಳಿಸಿದರು. ಅಷ್ಟೇ ಅಲ್ಲದೇ, ಸುಳ್ಳು ಸುದ್ದಿಗಳನ್ನ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡರು. ಮುಂದೆ ಓದಿ.....
ಯಾರು ಆತಂಕ ಪಡಬೇಡಿ
''ಅಮ್ಮನ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಡಾಕ್ಟರ್ ನೋಡಿಕೊಳುತ್ತಿದ್ದಾರೆ. ನಿನ್ನೆಗಿಂತ ಇಂದು ಬಿಪಿ ನಾರ್ಮಲ್ ಆಗಿದೆ'' -ಶಿವರಾಜ್ ಕುಮಾರ್, ನಟ
ಸುಳ್ಳು ಸುದ್ದಿ ಹಬ್ಬಿಸಬೇಡಿ
''ವೆಂಟಿಲೇಟರ್ ಅಂತ ಹೇಳಿದಾಗ ಎಲ್ಲರಿಗೆ ಭಯವಾಗುವುದು ಸಾಮಾನ್ಯ. ವೆಂಟಿಲೇಟರ್ ನಿಂದ ಹೊರ ಬರುವವರಿಗೂ ತುಂಬಾ ಚೆನ್ನಾಗಿದ್ದಾರೆ ಎಂದು ಹೇಳುವುದಕ್ಕೆ ಆಗಲ್ಲ. ಆದರೆ ಬೇರೆ ಯಾವುದೇ ರೀತಿಯ ಸುದ್ದಿ ಹಬ್ಬಿಸಬೇಡಿ''-ಶಿವರಾಜ್ ಕುಮಾರ್, ನಟ
ರಾಘವೇಂದ್ರ ರಾಜ್ ಕುಮಾರ್
''ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಅಮ್ಮನ ಆರೋಗ್ಯ ಸುಧಾರಿಸಲಿ ಅಂತ ದೇವರಲ್ಲಿ ಪ್ರಾರ್ಥಿಸಬೇಕು. ಈಗ ನಿಮ್ಮ ಪ್ರಾರ್ಥನೆಗಳ ಅಗತ್ಯವಿದೆ''- ರಾಘವೇಂದ್ರ ರಾಜ್ ಕುಮಾರ್, ನಟ
ವೈದ್ಯರು ಏನು ಹೇಳಿದರು
''ಬಹು ಅಂಗಾಗ ವೈಫಲ್ಯದಿಂದ ಬಳುತ್ತಿರುವ ಪಾರ್ವತಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಹೆಚ್ಚು ಬಳಲುತ್ತಿದ್ದಾರೆ. ಹೀಗಾಗಿ ಕೃತಕ ಉಸಿರಾಟದ ವ್ಯವಸ್ಥೆಯನ್ನ ಮಾಡಲಾಗಿದೆ. ಸದ್ಯ, ಯಾವುದೇ ರೀತಿಯ ಆತಂಕ ಪಡುವಂತಿಲ್ಲ. ಇನ್ನು 24 ಗಂಟೆಗಳ ಕಾಲ ಅವರನ್ನ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತೆ''- ಡಾ.ನರೇಶ್ ಶೆಟ್ಟಿ, ಸಂಜಯ್ ಕುಲಕರ್ಣಿ