Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ಜೊತೆ ಸಿನಿಮಾ ನೋಡುವ ಚಾನ್ಸ್ ಮಿಸ್ ಮಾಡ್ಕೋಬೇಡಿ.!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಸಿನಿಮಾ ನೋಡುವ ಗೋಲ್ಡನ್ ಚಾನ್ಸ್ ನಿಮಗೆ ಸಿಗಲಿದೆ. ಶಿವಣ್ಣ ಅಭಿನಯದ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರ ರಾಜ್ಯಾದ್ಯಂತ 25ನೇ ದಿನ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸೆಂಚುರಿ ಸ್ಟಾರ್ ಅಭಿಮಾನಿಗಳ ಜೊತೆ ಸಿನಿಮಾ ನೋಡಲು ನಿರ್ಧರಿಸಿದ್ದಾರೆ.
ಕೆ.ಜಿ ರಸ್ತೆಯಲ್ಲಿರುವ ತ್ರಿವೇಣಿ ಚಿತ್ರಮಂದಿರದಲ್ಲಿ ಮಂಗಳವಾರ (ಜೂನ್ 13) ಮಧ್ಯಾಹ್ನ ಕರುನಾಡ ಚಕ್ರವರ್ತಿ, 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಸಿನಿಮಾ ನೋಡಲಿದ್ದಾರೆ. ಹೀಗಾಗಿ, ಶಿವಣ್ಣ ಫ್ಯಾನ್ಸ್ ಹ್ಯಾಟ್ರಿಕ್ ಹೀರೋ ಜೊತೆಯಲ್ಲಿ ಕೂತು ಈ ಸಿನಿಮಾ ನೋಡಬಹುದಾಗಿದೆ.
ವಿಮರ್ಶೆ: 'ಬಂಗಾರದ ಮನುಷ್ಯ'ನ ಪ್ರತಿರೂಪ ಶಿವಣ್ಣನ ಈ 'ಬಂಗಾರ' ರೂಪ
ಶಿವರಾಜ್ ಕುಮಾರ್ ಅಭಿನಯದ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರಕ್ಕೆ ಈಗಾಗಲೇ ಎಲ್ಲೆಡೆ ಪ್ರಶಂಸೆ ಸಿಕ್ಕಿದ್ದು, ಮಾಜಿ ಪ್ರಧಾನಿ ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಸೇರಿದಂತೆ ಹಲವು ರಾಜಕೀಯ ಗಣ್ಯರು ಚಿತ್ರವನ್ನ ಮೆಚ್ಚಿಕೊಂಡಿದ್ದಾರೆ. ಚಿತ್ರದಲ್ಲಿ ರೈತರ ಸಮಸ್ಯೆಗಳು ಮತ್ತು ಅದಕ್ಕೆ ಸರ್ಕಾರ ತೆಗೆದುಕೊಳ್ಳಬಹುದಾದ ಪರಿಹಾರಗಳನ್ನ ಮನರಂಜನೆಯ ಜೊತೆ ಸೂಕ್ಷ್ಮವಾಗಿ ತೋರಿಸಲಾಗಿದೆ.
'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರ ನೋಡಿ ಭೇಷ್ ಎಂದ್ರಾ ವಿಮರ್ಶಕರು.?
ಈ ಚಿತ್ರವನ್ನ ಯೋಗಿ ನಿರ್ದೇಶನ ಮಾಡಿದ್ದು, ಜಯಣ್ಣ-ಭೋಗೇಂದ್ರ ನಿರ್ಮಾಣ ಮಾಡಿದ್ದರು. ವಿ.ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದೆ. ವಿದ್ಯಾ ಪ್ರದೀಪ್ ನಾಯಕಿ ಆಗಿದ್ದರು. ಉಳಿದಂತೆ ಸಾಧುಕೋಕಿಲಾ, ಚಿಕ್ಕಣ್ಣ, ಶರತ್ ಲೋಹಿತಾಶ್ವ, ಶ್ರೀನಿವಾಸ ಮೂರ್ತಿ, ಸೇರಿದಂತೆ ಹಲವರು ಬಣ್ಣ ಹಚ್ಚಿದ್ದರು. ಮೇ 19 ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.