Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯ್ಯಪ್ಪ ಮಾಲೆ ಧರಿಸಿದ ನಟ ಶಿವರಾಜ್ ಕುಮಾರ್, ನಿರ್ದೇಶಕ ರಘುರಾಮ್
ನಟ ಶಿವರಾಜ್ ಕುಮಾರ್ ಪ್ರತಿವರ್ಷವೂ ಅಯ್ಯಪ್ಪ ಮಾಲೆ ಧರಿಸುತ್ತಾರೆ. ಈ ವರ್ಷವೂ ಅದನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗಿದ್ದಾರೆ. ಇಂದು (ಫೆಬ್ರವರಿ 22) ಶಿವರಾಜ್ ಕುಮಾರ್, ನಿರ್ದೇಶಕ ರಘುರಾಮ್ ಸೇರಿದಂತೆ ಗೆಳೆಯರ ಜೊತೆಗೆ ಮಾಲೆ ಹಾಕಿಕೊಂಡಿದ್ದಾರೆ.
Recommended Video
ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ಅಯ್ಯಪ್ಪ ಸ್ವಾಮಿ ದೇವಾಲಯಲ್ಲಿ ಇಂದು ಪೂಜೆ ಸಲ್ಲಿಸಿ, ಮಾಲೆ ಧರಿಸಿದ್ದಾರೆ. ಈ ವೇಳೆ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ಜೊತೆಗಿದ್ದರು. ಇಂದು ಮಾಲೆ ಧರಿಸಿದ್ದು, ಮಾರ್ಚ್ 14 ರಂದು ಬೆಂಗಳೂರಿನಿಂದ ಶಬರಿಮಲೆಗೆ ಹೊರಡಲಿದ್ದಾರೆ.
ಸೆಂಚುರಿ ಸ್ಟಾರ್ 'RDX' ಸಿನಿಮಾ ಶುಭಾರಂಭ: ಭಾಸ್ಕರ್ ರಾವ್, ಪುನೀತ್ ಭಾಗಿ
ಇಂದಿನ ಪೂಜೆಯ ಫೋಟೋಗಳನ್ನು ನಿರ್ದೇಶಕ ರಘುರಾಮ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ''ದೂರದ ಶಬರಿಮಲೆಗೆ ಹೊರಡಲು ಮಾಲೆ ಅನ್ನೋ ಪವಿತ್ರತೆಯನ್ನು ಧರಿಸಲು, 18 ಶ್ರೇಷ್ಠ ಮೆಟ್ಟಲುಗಳನ್ನು ಹತ್ತಲು, ಅಯ್ಯಪ್ಪನ ದರ್ಶನಕ್ಕೆ ಕರುನಾಡ ದೊರೆಯೊಂದಿಗೆ ಇದೆ (14/03/20) ಹೊರಟಿರುವೆವು ಸ್ವಾಮಿಯೇ ನಿನ್ನೆ ನೋಡಲು'' ಎಂದು ಬರೆದುಕೊಂಡಿದ್ದಾರೆ.
ಸದ್ಯ, ಶಿವರಾಜ್ ಕುಮಾರ್ 'ಭಜರಂಗಿ 2' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. 'ದ್ರೋಣ' ಚಿತ್ರದ ಟ್ರೇಲರ್ ಹಾಗೂ ಹಾಡುಗಳು ನಾಳೆ (ಫೆಬ್ರವರಿ 23) ಬಿಡುಗಡೆ ಆಗಲಿದೆ. ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಶಿವರಾಜ್ ಕುಮಾರ್ ನಟನೆಯ 'ಆರ್ ಡಿ ಎಕ್ಸ್' ಸಿನಿಮಾದ ಮುಹೂರ್ತ ಇತ್ತೀಚಿಗಷ್ಟೆ ನಡೆದಿದೆ. ತಮಿಳು ನಿರ್ದೇಶಕ ರವಿ ಅರಸು ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಅಯ್ಯಪ್ಪ ಮಾಲೆ ಧರಿಸಿದ ಶಿವರಾಜ್ ಕುಮಾರ್@OnlyShivanna @ShivarajkumarFc @NimmaShivanna @raghuram9777 pic.twitter.com/GeS6NkDneX
— Kannada Filmibeat (@FilmibeatKa) February 22, 2020