Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೀತಿ ಸಂಹಿತೆ ಉಲ್ಲಂಘನೆ': ಕೋರ್ಟ್ ಗೆ ಹಾಜರಾದ ಶಿವಣ್ಣ ದಂಪತಿ
2014ನೇ ವರ್ಷದ ಲೋಕಸಭಾ ಚುನಾವಣೆ ವೇಳೆ 'ನೀತಿ ಸಂಹಿತೆ ಉಲ್ಲಂಘಿಸಿದ' ಹಿನ್ನಲೆಯಲ್ಲಿ ಆರೋಪ ಎದುರಿಸುತ್ತಿರುವ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಚಾರಣೆಗಾಗಿ ಇಂದು (ಫೆಬ್ರವರಿ 24) ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ತಿಂಗಳು ಮಾರ್ಚ್ 26ಕ್ಕೆ ಮುಂದೂಡಿದ್ದಾರೆ.[ಶಿವಣ್ಣ30: ಅಭಿಮಾನಿಗಳು ಶಿವಣ್ಣನಿಗೆ ಪ್ರೀತಿಯಿಂದ ಕೊಟ್ಟ ಗಿಫ್ಟೇನು?]
ಜೆ.ಡಿ.ಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಅಂದಹಾಗೆ ಮತದಾನಕ್ಕೆ 48 ಘಂಟೆ ಮುನ್ನ ಬಹಿರಂಗ ಮತಯಾಚನೆಗೆ ಅವಕಾಶ ಇಲ್ಲದ ಸಂದರ್ಭದಲ್ಲಿ ಅಭ್ಯರ್ಥಿ ಪರ ಮತಯಾಚಿಸಿದ ಆರೋಪ ನಟ ಶಿವರಾಜ್ ಕುಮಾರ್ ಅವರ ಮೇಲಿದೆ.[ಶಿವಣ್ಣ30 ವಿಶೇಷ: ಶಿವಣ್ಣ ಅವರ 20 ಉತ್ತಮ ಚಿತ್ರಗಳ List]
ಶಿವಮೊಗ್ಗದ ನವುಲೆ ಬಳಿ ನಟ ಶಿವಣ್ಣ, ಗೀತಾ ಶಿವರಾಜ್ ಕುಮಾರ್ ಮತ್ತು ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ಮನೆ ಮನೆ ಪ್ರಚಾರ ಮಾಡಿದ್ದರು. ಈ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.
ಇಂದು ಶಿವಣ್ಣ ಮತ್ತು ಗೀತಾ ದಂಪತಿಗಳು ಕೋರ್ಟ್ ಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.