Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಶಿವಸೈನ್ಯ' ತಂಡದ ಅಪ್ಪಟ್ಟ ಅಭಿಮಾನಿ ನಿಧನ
ನಟ ಶಿವರಾಜ್ ಕುಮಾರ್ ಅವರ ಅಪ್ಪಟ್ಟ ಅಭಿಮಾನಿ ಕಶ್ಯಪ್ ಸಿಂಹ (27) ನಿಧನ ಹೊಂದಿದ್ದಾರೆ. ಹೃದಯಘಾತದಿಂದ ಅವರ ಇಂದು ವಿಧಿವಶರಾಗಿದ್ದಾರೆ. ಶ್ರೀನಗರದ ತಮ್ಮ ನಿವಾಸದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಅವರು ಕೊನೆಯೂಸಿರೆಳೆದಿದ್ದಾರೆ.
ಬೆಂಗಳೂರಿನವರೇ ಆದ ಕಶ್ಯಪ್ ಸಿಂಹ ಟಿವಿಎಸ್ ಮೋಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಪ್ಪ ಅಮ್ಮನಿಗೆ ಒಬ್ಬನೇ ಮಗನಾಗಿದ್ದರು. ರಾಯಲ್ ಎನ್ಫೀಲ್ಡ್ ಬೈಕ್ ರೈಡರ್ ಆಗಿದ್ದರು. ಅನೇಕ ರಾಲಿಗಳಲ್ಲಿ ಭಾಗಿಯಾಗಿದ್ದರು. ಬೈಕ್ ರೈಡ್ ಎಂದರೆ ಅವರಿಗೆ ಬಹಳ ಇಷ್ಟವಾಗಿತ್ತು.
ಅನಾರೋಗ್ಯದ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್!
ಶಿವರಾಜ್ ಕುಮಾರ್ ಅವರ ಅಭಿಮಾನದಿಂದ 'ಶಿವಸೈನ್ಯ' ಎನ್ನುವ ತಂಡವನ್ನು ಬೆಳೆಸಿದರು. ಅದರ ಮೂಲಕ ತಮ್ಮ ಅಭಿಮಾನವನ್ನು ತೋರುತ್ತಿದ್ದರು. ಶಿವಣ್ಣನ ಯಾವುದೇ ಸಿನಿಮಾ ಬಿಡುಗಡೆಯಾದರೂ ಸಂಭ್ರಮಾಚರಣೆ ಮಾಡುತ್ತಿದ್ದರು. ಕಳೆದ ವಾರ ಬಿಡುಗಡೆಯಾದ 'ರುಸ್ತುಂ' ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಿದ್ದರು.
ಇಂತಹ ಶಿವರಾಜ್ ಕುಮಾರ್ ಅವರ ಅಭಿಮಾನಿ ಇಂದು ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚಿಕ್ಕವಯಸ್ಸಿಯಲ್ಲಿಯೇ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಅವರ ಸಾವಿಗೆ ಇಡೀ ಕುಟುಂಬ ದುಃಖದಲ್ಲಿದೆ. ಶಿವರಾಜ್ ಕುಮಾರ್ ಅಭಿಮಾನಿಗಳು ಕಶ್ಯಪ್ ಗೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಗುಡ್ಡದ ಹಳ್ಳಿಯಲ್ಲಿ ಕಶ್ಯಪ್ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.