Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಶಿವಸೈನ್ಯ' ತಂಡದ ಅಪ್ಪಟ್ಟ ಅಭಿಮಾನಿ ನಿಧನ
ನಟ ಶಿವರಾಜ್ ಕುಮಾರ್ ಅವರ ಅಪ್ಪಟ್ಟ ಅಭಿಮಾನಿ ಕಶ್ಯಪ್ ಸಿಂಹ (27) ನಿಧನ ಹೊಂದಿದ್ದಾರೆ. ಹೃದಯಘಾತದಿಂದ ಅವರ ಇಂದು ವಿಧಿವಶರಾಗಿದ್ದಾರೆ. ಶ್ರೀನಗರದ ತಮ್ಮ ನಿವಾಸದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಅವರು ಕೊನೆಯೂಸಿರೆಳೆದಿದ್ದಾರೆ.
ಬೆಂಗಳೂರಿನವರೇ ಆದ ಕಶ್ಯಪ್ ಸಿಂಹ ಟಿವಿಎಸ್ ಮೋಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಪ್ಪ ಅಮ್ಮನಿಗೆ ಒಬ್ಬನೇ ಮಗನಾಗಿದ್ದರು. ರಾಯಲ್ ಎನ್ಫೀಲ್ಡ್ ಬೈಕ್ ರೈಡರ್ ಆಗಿದ್ದರು. ಅನೇಕ ರಾಲಿಗಳಲ್ಲಿ ಭಾಗಿಯಾಗಿದ್ದರು. ಬೈಕ್ ರೈಡ್ ಎಂದರೆ ಅವರಿಗೆ ಬಹಳ ಇಷ್ಟವಾಗಿತ್ತು.
ಅನಾರೋಗ್ಯದ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್!
ಶಿವರಾಜ್ ಕುಮಾರ್ ಅವರ ಅಭಿಮಾನದಿಂದ 'ಶಿವಸೈನ್ಯ' ಎನ್ನುವ ತಂಡವನ್ನು ಬೆಳೆಸಿದರು. ಅದರ ಮೂಲಕ ತಮ್ಮ ಅಭಿಮಾನವನ್ನು ತೋರುತ್ತಿದ್ದರು. ಶಿವಣ್ಣನ ಯಾವುದೇ ಸಿನಿಮಾ ಬಿಡುಗಡೆಯಾದರೂ ಸಂಭ್ರಮಾಚರಣೆ ಮಾಡುತ್ತಿದ್ದರು. ಕಳೆದ ವಾರ ಬಿಡುಗಡೆಯಾದ 'ರುಸ್ತುಂ' ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಿದ್ದರು.
ಇಂತಹ ಶಿವರಾಜ್ ಕುಮಾರ್ ಅವರ ಅಭಿಮಾನಿ ಇಂದು ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚಿಕ್ಕವಯಸ್ಸಿಯಲ್ಲಿಯೇ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಅವರ ಸಾವಿಗೆ ಇಡೀ ಕುಟುಂಬ ದುಃಖದಲ್ಲಿದೆ. ಶಿವರಾಜ್ ಕುಮಾರ್ ಅಭಿಮಾನಿಗಳು ಕಶ್ಯಪ್ ಗೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಗುಡ್ಡದ ಹಳ್ಳಿಯಲ್ಲಿ ಕಶ್ಯಪ್ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.