Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಚಿತ್ರರಂಗದ ನಾಯಕತ್ವ ವಹಿಸಿಕೊಂಡ ಬಳಿಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೊದಲ ಬಾರಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರೇಸ್ ಕೋರ್ಸ್ ನಲ್ಲಿರುವ ಡಿಸಿಎಂ ನಿವಾಸಕ್ಕೆ ತೆರಳಿದ ಶಿವರಾಜ್ ಕುಮಾರ್ ಕೆಲವು ಸಮಯ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
Recommended Video
ಇತ್ತೀಚಿಗಷ್ಟೆ ಶಿವರಾಜ್ ಕುಮಾರ್ ನಿವಾಸದಲ್ಲಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರನ್ನು ಆಹ್ವಾನಿಸಿ ಚಿತ್ರರಂಗದ ಪ್ರಸ್ತುತ ಸಮಸ್ಯೆಗಳು ಹಾಗೂ ಎದುರಿಸಲಿರುವ ಸವಾಲುಗಳು ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು. ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು ಶಿವಣ್ಣ ಮನೆಯಲ್ಲಿ ನಡೆದ ಸಂಭೆಯಲ್ಲಿ ಹಾಜರಿದ್ದರು.
ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಇದೀಗ ಶಿವಣ್ಣ ಅಶ್ವತ್ಥ್ ನಾರಾಯಣ ಅವರ ಜೊತೆ ಮಾತನಾಡಿ ಕೊರೊನಾ ಕಾರಣದಿಂದ ಸಂಕಷ್ಟಕ್ಕೊಳಗಾಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಸರ್ಕಾರದ ನೆರವಿಗೆ ಮನವಿ ಮಾಡಿದ್ದಾರೆ. ಜೊತೆಗೆ ಸಂಕಷ್ಟದಲ್ಲಿರುವ ಸಹ ಕಲಾವಿದರು ಚಿತ್ರರಂಗವನ್ನೆ ಅವಲಂಬಿಸಿರುವ ಕಾರ್ಮಿಕರ ನೆರವಿಗೆ ಸರ್ಕಾರ ದಾವಿಸಬೇಕೆಂದು ಶಿವಣ್ಣ ಮನವಿ ಮಾಡಿದ್ದಾರೆ.
ಇನ್ನೂ ಶಿವರಾಜ್ ಕುಮಾರ್ ಸಿ ಎಂ ಯಡಿಯೂರಪ್ಪ ಭೇಟಿಯಾಗಬೇಕಿತ್ತು. ಆದರೆ ಸಿಎಂಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಭೇಟಿಯನ್ನು ಮುಂದೂಡಿದ್ದಾರೆ. ಸದ್ಯದಲ್ಲೇ ಸಿಎಂ ಭೇಟಿಯಾಗಿ ಚಿತ್ರರಂಗದ ಪುನಶ್ಚೇತನದ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.