Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಕಾರಣಕ್ಕೆ ಸೆಕ್ಯೂರಿಟಿ ಗಾರ್ಡ್ ಆದ ಕನ್ನಡದ ಪೋಷಕ ನಟ!
ಕನ್ನಡದ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಶ್ರೀನಾಥ್ ವಸಿಷ್ಠ ಈಗ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ.
Recommended Video
ತಮ್ಮ ಅಪಾರ್ಟ್ಮೆಂಟ್ ನಲ್ಲಿ ಇದ್ದ ಸೆಕ್ಯೂರಿಟಿ ಗಾರ್ಡ್ ಗೆ ಕೊರೊನಾ ಸೊಂಕು ತಗುಲಿದೆ. ಇತರ ಸಿಬ್ಬಂದಿ ಕ್ವಾರಟೈನ್ ನಲ್ಲಿ ಇದ್ದಾರೆ. ಹೀಗಾಗಿ ಸೆಕ್ಯೂರಿಟಿ ಗಾರ್ಡ್ ಕೆಲಸವನ್ನು ವಾಸ ಮಾಡುತ್ತಿರುವ ನಿವಾಸಿಗಳೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹೀಗಾಗಿ ನಿವಾಸಿಗಳೆ ಆ ಕೆಲಸ ಮಾಡುತ್ತಿದ್ದಾರೆ.
ಮತ್ತೊಬ್ಬ ಧಾರಾವಾಹಿ ನಟನಿಗೆ ಕೊರೊನಾ ಪಾಸಿಟಿವ್
ನಟ ಶ್ರೀನಾಥ್ ವಸಿಷ್ಠ ಸಹ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲ ಕಾಲ ಕೆಲಸ ಮಾಡಿದ್ದಾರೆ. ತಮ್ಮ ಅನುಭವವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸೆಕ್ಯೂರಿಟಿ ಗಾರ್ಡ್ಗೆ ಪಾಸಿಟಿವ್ ವರದಿ ಬಂದಿದೆ
ನಮ್ಮ ಅಪಾರ್ಟ್ಮೆಂಟ್ನ ಒಬ್ಬ ಸೆಕ್ಯೂರಿಟಿ ಗಾರ್ಡ್ಗೆ ಕೊರೊನಾ ಪಾಸಿಟಿವ್ ಆಗಿದೆ. ಇನ್ನುಳಿದ ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳು ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಹಾಗಾಗಿ ಅಪಾರ್ಟ್ಮೆಂಟ್ ನಿವಾಸಿಗಳೇ ಸೆಕ್ಯೂರಿಟಿ ಗಾರ್ಡ್ ಕಾರ್ಯ ಮಾಡುವ ನಿಶ್ಚಯ ಮಾಡಿದ್ದೇವೆ ಎಂದು ಶ್ರೀನಾಥ್ ವಸಿಷ್ಠ ಬರೆದುಕೊಂಡಿದ್ದಾರೆ.
ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿದ ನಟ
ಇಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ನಾನು ಸೆಕ್ಯೂರಿಟಿ ಗಾರ್ಡ್ ಕಾರ್ಯ ಮಾಡಿದ್ದೇನೆ. ಎಲ್ಲರೂ ಈ ಕಾರ್ಯವನ್ನು ಹಂಚಿಕೊಂಡಿದ್ದು, 10 ದಿನಗಳ ಕಾಲ ಅಪಾರ್ಟ್ಮೆಂಟ್ ವಾಸಿಗಳೇ ಸೆಕ್ಯೂರಿಟಿ ಗಾರ್ಡ್ ಆಗಿರಲಿದ್ದಾರೆ ಎಂದಿದ್ದಾರೆ.
ಕೊರೊನಾ ವಿರುದ್ಧ ಗೆಲ್ಲುತ್ತಾರಾ ಅಮಿತಾಬ್? ಅವರಿಗಿರುವ ಆರೋಗ್ಯ ಸಮಸ್ಯೆಗಳೇನು?
ಪುತ್ರ ಋತ್ವಿಕ್ ಸಹ ಸೆಕ್ಯೂರಿಟಿ ಗಾರ್ಡ್
ನಾಳೆ ರಾತ್ರಿಯಿಂದ ನನ್ನ ಪುತ್ರ ಋತ್ವಿಕ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಮಾಡಲಿದ್ದಾರೆ. ಹೀಗೆ ಎಲ್ಲರೂ ಕೆಲಸವನ್ನು ಹಂಚಿಕೊಂಡಿದ್ದೇವೆ. ಇದೊಂದು ಹೊಸ ಅನುಭವ ಎಂದು ಶ್ರೀನಾಥ್ ವಸಿಷ್ಠ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಕೊರೊನಾ ಸ್ಪೋಟ
ಬೆಂಗಳೂರಿನಲ್ಲಿ ಕೊರೊನಾ ವೈರಸ್ ತ್ವರಿತಗತಿಯಲ್ಲಿ ಹಬ್ಬುತ್ತಿದ್ದು, ದಿನೇ-ದಿನೇ ತೀವ್ರತೆ ಹೆಚ್ಚಿಸಿಕೊಳ್ಳುತ್ತಿದೆ. ಬೆಂಗಳೂರು ನಗರದಲ್ಲಿ ಈ ವರೆಗೆ (ಜುಲೈ 13) 19,702 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 321 ಮಂದಿ ಕೊರೊನಾ ಕಾರಣಕ್ಕೆ ಸಾವನ್ನಪ್ಪಿದ್ದಾರೆ.