ಡಾಕ್ಟರೇಟ್ ಪಡೆದ ಹಿರಿಯ ನಟ ಶ್ರೀನಿವಾಸ್ ಮೂರ್ತಿ
ಕನ್ನಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರಿಗೆ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ. ಗ್ಲೋಬಲ್ ಪೀಸ್ ವಿಶ್ವವಿದ್ಯಾನಿಲಯ ಶ್ರೀನಿವಾಸ್ ಮೂರ್ತಿ ರವರಿಗೆ ಗೌರವ ಡಾಕ್ಟರೇಟ್ ನೀಡಿದೆ.
ಕಲಾ ವಿಭಾಗದಲ್ಲಿ ನಟ ಶ್ರೀನಿವಾಸ್ ಮೂರ್ತಿ ಅವರನ್ನು ವಿಶ್ವವಿದ್ಯಾನಿಲಯ ಗುರುತಿಸಿದೆ. ಇಷ್ಟ ವರ್ಷಗಳ ಕಾಲ ಸಿನಿಮಾರಂಗದಲ್ಲಿ ಶ್ರೀನಿವಾಸ್ ಮೂರ್ತಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಗೌರವ ಸಲ್ಲಿಸಲಾಗಿದೆ.
ಇತ್ತೀಚಿಗಷ್ಟೆ ಒಂದು ಸಣ್ಣ ಕಾರ್ಯಕ್ರಮದ ಮೂಲಕ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ. ಈ ಕಾರ್ಯಕ್ರಮದ ಫೋಟೋಗಳನ್ನು ಶ್ರೀನಿವಾಸ್ ಮೂರ್ತಿ ಅವರ ಪುತ್ರ ನಟ ನವೀನ್ ಕೃಷ್ಣ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಂದೆಗೆ ಬಂದ ಪ್ರಶಸ್ತಿಯ ಬಗ್ಗೆ ಫಿಲ್ಮಿಬೀಟ್ ಕನ್ನಡದ ಜೊತೆಗೆ ಮಾತನಾಡಿದ್ದಾರೆ.

ಅಂದಹಾಗೆ, ಶ್ರೀನಿವಾಸ್ ಮೂರ್ತಿ ಎರಡು ಬಾರಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಕನ್ನಡದ ನೂರಾರೂ ಸಿನಿಮಾಗಳಲ್ಲಿ ಪೋಷಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ, 'ಕುರುಕ್ಷೇತ್ರ' ಚಿತ್ರದಲ್ಲಿ ದ್ರೋಣಾಚಾರ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಡಾ ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್, ವಿಷ್ಣುವರ್ಧನ್, ಬಿ ಸರೋಜ ದೇವಿ, ಶಿವರಾಜ್ ಕುಮಾರ್, ಅಂಬರೀಶ್, ಉಪೇಂದ್ರ, ರೇಖಾದಾಸ್, ವಿ ನಾಗೇಂದ್ರ ಪ್ರಸಾದ್, ನಿರ್ಮಾಪಕ ಕೆ ಮಂಜು ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರಾಗಿದ್ದಾರೆ.


Click it and Unblock the Notifications











