Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ವಿರುದ್ಧದ ಕೇಸ್ ಹಿಂತೆಗೆದುಕೊಳ್ಳುವಂತೆ ಅಭಿಮಾನಿ ಧಮ್ಕಿ
Recommended Video
ನಟ ಸುದೀಪ್ ವಿರುದ್ಧದ ಕೇಸ್ ಹಿಂಪಡೆಯುವಂತೆ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ನವೀನ್ ಎಂಬಾತ ದೀಪಕ್ ಮಯೂರ್ ಗೆ ಧಮ್ಕಿ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ದೀಪಕ್ ಮಯೂರ್ ನಟ ಸುದೀಪ್ ಬಾಡಿಗೆ ಹಣ ನೀಡದ ಕುರಿತು ಈ ಹಿಂದೆ ಕೇಸ್ ದಾಖಲು ಮಾಡಿದ್ದರು. ಅದೆ ಕಾರಣಕ್ಕೆ ಈಗ ದೀಪಕ್ ಮಯೂರ ಪಟೇಲ್ ಗೆ ನವೀನ್ ಧಮ್ಕಿ ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೈಗೂರು ಗ್ರಾಮದಲ್ಲಿ ದೀಪಕ್ ಮಯೂರ್ ಅವರ ಮನೆಯನ್ನು ಬಾಡಿಗೆ ಪಡೆದು ಕಿಚ್ಚ ಸುದೀಪ್ ಅಲ್ಲಿ ತಮ್ಮ ನಿರ್ಮಾಣದ 'ವಾರಸ್ದಾರ' ಧಾರಾವಾಹಿ ಚಿತ್ರೀಕರಣ ಮಾಡಿದ್ದರು. ಆದರೆ, ಅದರ ಬಾಡಿಗೆ ಹಣವನ್ನು ನೀಡಿಲ್ಲ ಎನ್ನುವುದು ದೀಪಕ್ ಅವರ ಆರೋಪವಾಗಿದೆ.
ನಟ-ನಿರ್ಮಾಪಕ ಸುದೀಪ್ ವಿರುದ್ಧ ದೂರು ದಾಖಲು
ಈ ಹಿಂದೆ ಈ ವಿಚಾರವಾಗಿ ಮಲ್ಲಂದೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ, ಈ ಕೇಸ್ ಅನ್ನು ವಾಪಸ್ ಪಡೆಯುವಂತೆ ನವೀನ್ ದೀಪಕ್ ಮಯೂರ್ ಗೆ ಧಮ್ಕಿ ಹಾಕಿದ್ದಾರೆ. ಇದೀಗ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ಧ ದೂರು ದಾಖಲಾಗಿದ್ದು, ನಿನ್ನೆ ನವೀನ್ ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
'ವಾರಸ್ಧಾರ' ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿತ್ತು. ನಟ ಸುದೀಪ್ ಇದರ ನಿರ್ಮಾಣದಲ್ಲಿ ಮಾಡಿದ್ದರು. ನಟಿ ಯಜ್ಞಶೆಟ್ಟಿ ಧಾರಾವಾಹಿಯ ಲೀಡ್ ರೋಲ್ ನಲ್ಲಿ ನಟಿಸಿದ್ದರು.