Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಸಂಕಷ್ಟ: ಬಡವರ ನೆರವಿಗೆ ಧಾವಿಸಿದ ಸುದೀಪ್ ಅಭಿಮಾನಿಗಳು
ಕೊರೊನಾ ವೈರಸ್ ಹಾವಳಿಗೆ ಇಡೀ ದೇಶವೆ ಬೆಚ್ಚಿ ಬಿದ್ದಿದೆ. ಕೊರೊನಾ ವಿರುದ್ಧ ಹೋರಾಡುವ ಸಲುವಾಗಿ ಇಡೀ ಭಾರತ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಅಸಾಹಯಕರು, ಕೂಲಿಕಾರ್ಮಿಕರು, ಅಸಹಾಯಕರು, ವಿಕಲ ಚೇತನರು ಸೇರಿದಂತೆ ಅನೇಕರು ಊಟ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Recommended Video
ಬಡವರಿಗೆ ಸಹಾಯ ಮಾಡಲು ಅನೇಕರು ಮುಂದೆ ಬಂದಿದ್ದಾರೆ. ಈಗಾಗಲೆ ಆಂಧ್ರ ಪ್ರದೇಶದಲ್ಲಿ ಕಲಾವಿದರು ಸಿಎಂ ಪರಿಹಾರ ನಿಧಿಗೆ ಕೋಟಿ ಕೋಟಿ ದೇಣಿಗೆ ನೀಡುತ್ತಿದ್ದಾರೆ. ಕನ್ನಡ ಸ್ಟಾರ್ ಕಲಾವಿದರು ಯಾಕೆ ಮುಂದೆ ಬರುತ್ತಿಲ್ಲ ಎನ್ನುವ ಪ್ರಶ್ನೆ ಎದ್ದಿರುವ ಬೆನ್ನಲ್ಲೆ ಅಭಿಮಾನಿಗಳು ಮುಂದೆ ನಿಂತು ಬಡವರಿಗೆ ಸಹಾಯ ಮಾಡುತ್ತಿದ್ದಾರೆ.
ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಕಿಚ್ಚ ಸುದೀಪ್ ಅಭಿಮಾನಿಗಳು ಸರ್ಕಾರದ ನಿಯಮವನ್ನು ಉಲ್ಲಂಘಿಸದೆ, ಸುದೀಪ್ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಜನರಿಗೆ ಆಹಾರವನ್ನು ವಿತರಣೆ ಮಾಡುತ್ತಿದ್ದಾರೆ.
ಪ್ಯಾಕ್ ಗಳಲ್ಲಿ ಆಹಾರವನ್ನು ತಂದು ಒಂದುಹೊತ್ತು ಊಟಕ್ಕು ಪರದಾಡುವಂತಹ ಸ್ಥಿತಿಯಲ್ಲಿರುವವರಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಜೆ.ಜೆ ನಗರ, ಬ್ಯಾಟರಾಯನ ಪುರ, ಗೋರಿಪಾಳ್ಯ, ಬಂಗಾರಪ್ಪ ನಗರ ಸೇರಿದಂತೆ ಅನೇಕ ಕಡೆ ಅಭಿಮಾನಿಗಳು ಬಡವರ ಹಸಿವನ್ನು ನೀಗಿಸುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಈ ಕಾರ್ಯವನ್ನು ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ನಾಡಿನಾದ್ಯಂತ ಮಾಡಲಿದ್ದಾರೆ.