Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಸಂಕಷ್ಟ: ಬಡವರ ನೆರವಿಗೆ ಧಾವಿಸಿದ ಸುದೀಪ್ ಅಭಿಮಾನಿಗಳು
ಕೊರೊನಾ ವೈರಸ್ ಹಾವಳಿಗೆ ಇಡೀ ದೇಶವೆ ಬೆಚ್ಚಿ ಬಿದ್ದಿದೆ. ಕೊರೊನಾ ವಿರುದ್ಧ ಹೋರಾಡುವ ಸಲುವಾಗಿ ಇಡೀ ಭಾರತ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಅಸಾಹಯಕರು, ಕೂಲಿಕಾರ್ಮಿಕರು, ಅಸಹಾಯಕರು, ವಿಕಲ ಚೇತನರು ಸೇರಿದಂತೆ ಅನೇಕರು ಊಟ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Recommended Video
ಬಡವರಿಗೆ ಸಹಾಯ ಮಾಡಲು ಅನೇಕರು ಮುಂದೆ ಬಂದಿದ್ದಾರೆ. ಈಗಾಗಲೆ ಆಂಧ್ರ ಪ್ರದೇಶದಲ್ಲಿ ಕಲಾವಿದರು ಸಿಎಂ ಪರಿಹಾರ ನಿಧಿಗೆ ಕೋಟಿ ಕೋಟಿ ದೇಣಿಗೆ ನೀಡುತ್ತಿದ್ದಾರೆ. ಕನ್ನಡ ಸ್ಟಾರ್ ಕಲಾವಿದರು ಯಾಕೆ ಮುಂದೆ ಬರುತ್ತಿಲ್ಲ ಎನ್ನುವ ಪ್ರಶ್ನೆ ಎದ್ದಿರುವ ಬೆನ್ನಲ್ಲೆ ಅಭಿಮಾನಿಗಳು ಮುಂದೆ ನಿಂತು ಬಡವರಿಗೆ ಸಹಾಯ ಮಾಡುತ್ತಿದ್ದಾರೆ.
ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಕಿಚ್ಚ ಸುದೀಪ್ ಅಭಿಮಾನಿಗಳು ಸರ್ಕಾರದ ನಿಯಮವನ್ನು ಉಲ್ಲಂಘಿಸದೆ, ಸುದೀಪ್ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಜನರಿಗೆ ಆಹಾರವನ್ನು ವಿತರಣೆ ಮಾಡುತ್ತಿದ್ದಾರೆ.
ಪ್ಯಾಕ್ ಗಳಲ್ಲಿ ಆಹಾರವನ್ನು ತಂದು ಒಂದುಹೊತ್ತು ಊಟಕ್ಕು ಪರದಾಡುವಂತಹ ಸ್ಥಿತಿಯಲ್ಲಿರುವವರಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಜೆ.ಜೆ ನಗರ, ಬ್ಯಾಟರಾಯನ ಪುರ, ಗೋರಿಪಾಳ್ಯ, ಬಂಗಾರಪ್ಪ ನಗರ ಸೇರಿದಂತೆ ಅನೇಕ ಕಡೆ ಅಭಿಮಾನಿಗಳು ಬಡವರ ಹಸಿವನ್ನು ನೀಗಿಸುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಈ ಕಾರ್ಯವನ್ನು ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ನಾಡಿನಾದ್ಯಂತ ಮಾಡಲಿದ್ದಾರೆ.