Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣಾ ಪ್ರಚಾರದ ಬಗ್ಗೆ ಸ್ಪಷ್ಟನೆ ನೀಡಿದ ಕಿಚ್ಚ ಸುದೀಪ್
Recommended Video
ಚುನಾವಣೆಗೆ ಇನ್ನು ಕೆಲವೇ ಕೆಲವು ದಿನಗಳಷ್ಟೇ ರಾಜಕೀಯ ಅಭ್ಯರ್ಥಿಗಳು ತಮ್ಮ ಸಂಪರ್ಕದಲ್ಲಿರುವ ಸ್ಟಾರ್ ಗಳನ್ನ ಕರೆಸಿ ತಮ್ಮ ಪರವಾಗಿ ಪ್ರಚಾರ ಮಾಡಿಸಲು ಮುಂದಾಗಿದ್ದಾರೆ. ಕೆಲ ಸ್ಟಾರ್ ಗಳು ಚುನಾವಣೆಗೂ ಮುಂಚೆಯೇ ಕೆಲ ಪಕ್ಷಗಳ ಪರವಾಗಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ.
ಸುದೀಪ್ ಚುನಾವಣಾ ಪ್ರಚಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರು ಯಾರು ?
ಈ ಬಾರಿಯ ಚುನಾವಣೆಯಲ್ಲಿ ಸಾಕಷ್ಟು ಸಿನಿಮಾ ಕಲಾವಿದರು ಕೂಡ ಸ್ಪರ್ಧೆಯಲ್ಲಿದ್ದಾರೆ. ಅವರರು ಕೂಡ ಬೀದಿಗಿಳಿದು ಮನೆ ಮನೆ ತಿರುಗಿ ಮತಯಾಚನೆ ಮಾಡುತ್ತಿದ್ದಾರೆ. ಇತ್ತ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ಗಿರಿಯನ್ನ ಪಡೆದುಕೊಂಡಿರುವ ಕಲಾವಿದರು ಕಳೆದ ಮೂರು ದಿನಗಳಿಂದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.
ಸ್ಯಾಂಡಲ್ ವುಡ್ ನ ಹ್ಯಾಂಡ್ ಸಮ್ ಹೀರೋ ಕಿಚ್ಚ ಸುದೀಪ್ ಸಿದ್ದರಾಮಯ್ಯ ಪರವಾಗಿ ಪ್ರಚಾರ ಮಾಡುತ್ತಾರೆ. ಶ್ರೀ ರಾಮುಲು ವಿರುದ್ದ ಪ್ರಚಾರ ಮಾಡುತ್ತಾರೆ. ಇಲ್ಲ ಸುದೀಪ್ ಪ್ರಚಾರ ಮಾಡುವುದು ಸುಳ್ಳು ಹೀಗೆ ಅಂತೆ ಕಂತೆ ಸುದ್ದಿ ಜೋರಾಗಿ ಹರಡಿತ್ತು. ಆದರೆ ಈ ಎಲ್ಲಾ ವಿಚಾರಕ್ಕೂ ಸುದೀಪ್ ಫುಲ್ ಸ್ಟಾಪ್ ಇಟ್ಟು ಪ್ರಚಾರ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಾಗಾದರೆ ಕಿಚ್ಚ ಹೇಳಿದ್ದು ಏನು? ಮುಂದೆ ಓದಿ
ಪ್ರಚಾರದ ಬಗ್ಗೆ ಕಿಚ್ಚ ಸ್ಪಷ್ಟನೆ
ಕಿಚ್ಚ ಸುದೀಪ್ ರಾಜಕೀಯ ಪ್ರಚಾರದ ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ರಾಜಕೀಯ ಪ್ರಚಾರದ ಬಗ್ಗೆ ಎಲ್ಲಿಯೂ ಹೇಳಿಲ್ಲ. ಶ್ರೀ ರಾಮುಲು ವಿರುದ್ಧ ಪ್ರಚಾರ ಮಾಡುವುದು ಸುಳ್ಳು. ಶ್ರೀ ರಾಮುಲು ಅವರಿಗೆ ಒಳ್ಳೆದಾಗಲಿ. ಮಾಧ್ಯಮದವರು ಸುದ್ದಿ ಮಾಡುವ ಮುನ್ನ ವಿಚಾರಣೆ ಮಾಡಿಕೊಂಡರೆ ಉತ್ತಮ ಎಂದಿದ್ದಾರೆ.
ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಒಪ್ಪಿಗೆ ನೀಡಿಲ್ಲ
ಸಿದ್ದರಾಮಯ್ಯ ಪರವಾಗಿ ಪ್ರಚಾರ ಮಾಡುತ್ತಾರೆ ಎನ್ನುವ ಸುದ್ದಿ ಬಗ್ಗೆ ಮಾಧ್ಯಮದವರ ಬಳಿ ಮಾತನಾಡಿರುವ ಕಿಚ್ಚ, ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಪ್ರಚಾರಕ್ಕೆ ಕರೆದಿರುವುದು ಸತ್ಯ. ಆದರೆ ನಾನಿನ್ನು ಕನ್ಫರ್ಮ್ ಮಾಡಿಲ್ಲ ಎಂದಿದ್ದಾರೆ.
ಸ್ನೇಹಿತನಿಗಾಗಿ ಪ್ರಚಾರ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ತಮ್ಮ ಆತ್ಮೀಯ ಸ್ನೇಹಿತರಾದ ರಾಜು ಗೌಡರ ಪರ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಸುರಪುರದಲ್ಲಿ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.
ಯಾರ ಪರವಾಗಿ ಪ್ರಚಾರ
ರಾಜು ಗೌಡ ಹಾಗೂ ಸಿದ್ದರಾಮಯ್ಯ ಇವರಿಬ್ಬರ ನಂತರ ಸುದೀಪ್ ಇನ್ನು ಯಾವ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತಾರೆ ಎನ್ನುವುದು ಗುಟ್ಟಾಗಿಯೇ ಉಳಿದಿದೆ. ಕುಮಾರಸ್ವಾಮಿ ಅವರ ಪರವಾಗಿಯೂ ಮತಯಾಚನೆ ಮಾಡುವ ಸಾಧ್ಯತೆಗಳಿವೆ ಎನ್ನುವ ಮಾತು ಕೇಳಿ ಬರುತ್ತಿದೆ.