ಪಿಓಪಿ ಗಣೇಶ ಬೇಡ ಎಂದ ನಟ ಕಿಚ್ಚ ಸುದೀಪ್
Recommended Video
ಗಣೇಶ ಹಬ್ಬ ಬಂದರೆ, ಪಿಓಪಿ ಗಣೇಶನ ಬದಲು, ಮಣ್ಣಿನ ಗಣೇಶನನ್ನು ಕೂರಿಸಿ ಎಂದು ಪ್ರತಿ ವರ್ಷ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತದೆ. ವರ್ಷದಿಂದ ವರ್ಷಕ್ಕೆ ಜನರು ಸಹ ಬದಲಾಗುತ್ತಿದ್ದಾರೆ.
ನಟ ಕಿಚ್ಚ ಸುದೀಪ್ ಕೂಡ ಪಿಓಪಿ ಗಣೇಶ ಬೇಡ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ''ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ತಿರುಗಿಸಿ ವಾಪಸ್ ಕೊಡುತ್ತಿರುವುದನ್ನು ನಾವು ಆನುಭವಿಸಿದ್ದೇವೆ. ಹಾಗಾಗಿ ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ" ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.
ಪ್ರಾಕೃತಿಕ ವಿಕೋಪಗಳ ಉದಾಹರಣೆ ನೀಡುವ ಮೂಲಕ ಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಕೂರಿಸಿ ಎಂದು ಸುದೀಪ್ ಮನವಿ ಮಾಡಿದ್ದಾರೆ.

ಈ ವರ್ಷದ ವಿಶೇಷ ಏನೆಂದರೆ, ಸುದೀಪ್ ಹುಟ್ಟುಹಬ್ಬದ ದಿನವೇ ಗಣೇಶ ಚತುರ್ಥಿ ಕೂಡ ಬಂದಿದ್ದೆ. ಹಬ್ಬದ ಸಂಭ್ರಮದ ಜೊತೆಗೆ ಸುದೀಪ್ ಹುಟ್ಟುಹಬ್ಬದ ಸಂಭ್ರಮ ಕೂಡ ಇದೆ. ಸುದೀಪ್ ನಟನೆಯ 'ಪೈಲ್ವಾನ್' ಸಿನಿಮಾ ಇದೇ ತಿಂಗಳ 12 ರಂದು ಬಿಡುಗಡೆ ಆಗಲಿದೆ.


Click it and Unblock the Notifications











