Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಖರ್ಚು ಮಾಡಿದ ಸುದೀಪ್: ಭಾವುಕರಾದ ನಟಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಷ್ಟದಲ್ಲಿರೋರಿಗೆ ಸಹಾಯ ಹಸ್ತ ಚಾಚುತ್ತಿರುತ್ತಾರೆ. ಸಂಕಷ್ಟದಲ್ಲಿರುವ ಸಾಕಷ್ಟು ಮಂದಿಗೆ ಸುದೀಪ್ ನೆರವು ನೀಡಿದ್ದಾರೆ. ಇತ್ತೀಚಿಗಷ್ಟೆ ಕೊರೊನಾದಿಂದ ಪ್ರಾಣ ಕೆಳೆದುಕೊಂಡ ಚಾಮರಾಜನಗರದ ಮೃತ ಕುಟುಂಬಗಳಿಗೆ ಸುದೀಪ್ ಸಹಾಯ ಹಸ್ತ ಚಾಚಿದ್ದಾರೆ.
Recommended Video
ಇದೀಗ ಬಿಗ್ ಬಾಸ್ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ನೀಡಿದ್ದಾರೆ. ಈ ಬಗ್ಗೆ ನಟಿ ಸೋನು ಪಾಟೀಲ್ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಕಣ್ಣೀರಾಕುತ್ತಲೇ ತಾಯಿಯ ಅನಾರೋಗ್ಯದ ಬಗ್ಗೆ ಮತ್ತು ಕಷ್ಟದಲ್ಲಿ ನೆರವಾದ ಸುದೀಪ್ ಬಗ್ಗೆ ಹೇಳಿಕೊಂಡಿದ್ದಾರೆ. ಮುಂದೆ ಓದಿ...
ಚಾಮರಾಜನಗರ ದುರಂತ: ಮೃತ ಕುಟುಂಬಗಳ ನೆರವಿಗೆ ಧಾವಿಸಿದ ಸುದೀಪ್
ನ್ಯುಮೋನಿಯಾದಿಂದ ಬಳಲುತ್ತಿರುವ ಸೋನು ಪಾಟಿಲ್ ತಾಯಿ
ಸೋನು ಪಾಟೀಲ್ ತಾಯಿ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ತಾಯಿಯನ್ನು ಉಳಿಸಿಕೊಳ್ಳಲು ಸೋನು ಆಸ್ಪತ್ರೆಯಲ್ಲಿ ಪರದಾಡುತ್ತಿದ್ದಾರೆ. ಕಳೆದ ಐದಾರು ದಿನಗಳ ಹಿಂದೆ ಸೋನು ಪಾಟೀಲ್ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆಸ್ಪತ್ರೆ ಕರ್ಚಿಗೆ ಹಣವಿಲ್ಲದೆ ಒದ್ದಾಡುತ್ತಿದ್ದಾರೆ. ಕಂಡಕಂಡವರ ಬಳಿ ಸಹಾಯ ಕೇಳಿದರು ಯಾರು ಮುಂದೆ ಬಂದಿಲ್ಲ. ಕೊನೆಗೆ ಕಿಚ್ಚ ಸುದೀಪ್ ಹಣಕಾಸಿನ ನೆರವು ನೀಡಿದ್ದಾರೆ.
ಸಹಾಯ ಹಸ್ತ ಚಾಚಿದ ಸುದೀಪ್
ಈ ಬಗ್ಗೆ ಸೋನು ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ಬೇಕಿತ್ತು. ಕಂಡಕಂಡವರ ಬಳಿ ಕೇಳಿದೆ ಆದರೆ ಯಾರು ಸಹಾಯಕ್ಕೆ ಮುಂದೆ ಬಂದಿಲ್ಲ. ಕೊನೆಗೆ ಸುದೀಪ್ ಅವರ ಬಳಿ ಕೇಳಿದೆ. ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಸುದೀಪ್ ಅವರಿಗೆ ವಿಶೇಷ ಕಾಳಜಿ. ಹಾಗಾಗಿ ಅವರ ಬಳಿ ಕೇಳಿದೆ. ಯಾವುದೇ ಮಾತು ಆಡದೆ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ಕಟ್ಟಿದ್ದಾರೆ. ನಮ್ಮ ಬಳಿ ಒಂದು ರೂಪಾಯಿ ಸಹ ಖರ್ಚು ಮಾಡಿಸಿಲ್ಲ ಎಂದು ಕಣ್ಣೀರಾಕಿದ್ದಾರೆ.
ತಾಯಿ ಫೋಟೊ ಹಂಚಿಕೊಂಡ ನಟಿ
ಆಸ್ಪತ್ರೆಯ ಬೆಡ್ ನಲ್ಲಿ ಮಲಗಿರುವ ತಾಯಿಯ ಫೋಟೋವನ್ನು ಶೇರ್ ಮಾಡಿ, ವಿಶ್ವ ತಾಯಂದಿರ ದಿನಕ್ಕೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೇಗ ಹುಷರಾಗು ಅಮ್ಮ ಎಂದು ಬರೆದುಕೊಂಡಿದ್ದಾರೆ.
ಆನಾರೋಗ್ಯದಿಂದ ಚೇತರಿಸಿಕೊಂಡಿರುವ ಸುದೀಪ್
ಸುದೀಪ್ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಸದ್ಯ ಚೇತರಿಸಿಕೊಂಡಿರುವ ಕಿಚ್ಚ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನೇನು ಕಿರುತೆರೆ ನಿರೂಪಣೆಗೆ ಮರಳಲಿದ್ದಾರೆ ಎನ್ನುವಷ್ಟೊತ್ತಿಗೆ ಕೊರೊನಾದಿಂದ ಬಿಗ್ ಬಾಸ್ ಶೋ ರದ್ದಾಗುತ್ತಿದೆ. ಸದ್ಯ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.