Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಖರ್ಚು ಮಾಡಿದ ಸುದೀಪ್: ಭಾವುಕರಾದ ನಟಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಷ್ಟದಲ್ಲಿರೋರಿಗೆ ಸಹಾಯ ಹಸ್ತ ಚಾಚುತ್ತಿರುತ್ತಾರೆ. ಸಂಕಷ್ಟದಲ್ಲಿರುವ ಸಾಕಷ್ಟು ಮಂದಿಗೆ ಸುದೀಪ್ ನೆರವು ನೀಡಿದ್ದಾರೆ. ಇತ್ತೀಚಿಗಷ್ಟೆ ಕೊರೊನಾದಿಂದ ಪ್ರಾಣ ಕೆಳೆದುಕೊಂಡ ಚಾಮರಾಜನಗರದ ಮೃತ ಕುಟುಂಬಗಳಿಗೆ ಸುದೀಪ್ ಸಹಾಯ ಹಸ್ತ ಚಾಚಿದ್ದಾರೆ.
Recommended Video
ಇದೀಗ ಬಿಗ್ ಬಾಸ್ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ನೀಡಿದ್ದಾರೆ. ಈ ಬಗ್ಗೆ ನಟಿ ಸೋನು ಪಾಟೀಲ್ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಕಣ್ಣೀರಾಕುತ್ತಲೇ ತಾಯಿಯ ಅನಾರೋಗ್ಯದ ಬಗ್ಗೆ ಮತ್ತು ಕಷ್ಟದಲ್ಲಿ ನೆರವಾದ ಸುದೀಪ್ ಬಗ್ಗೆ ಹೇಳಿಕೊಂಡಿದ್ದಾರೆ. ಮುಂದೆ ಓದಿ...
ಚಾಮರಾಜನಗರ ದುರಂತ: ಮೃತ ಕುಟುಂಬಗಳ ನೆರವಿಗೆ ಧಾವಿಸಿದ ಸುದೀಪ್
ನ್ಯುಮೋನಿಯಾದಿಂದ ಬಳಲುತ್ತಿರುವ ಸೋನು ಪಾಟಿಲ್ ತಾಯಿ
ಸೋನು ಪಾಟೀಲ್ ತಾಯಿ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ತಾಯಿಯನ್ನು ಉಳಿಸಿಕೊಳ್ಳಲು ಸೋನು ಆಸ್ಪತ್ರೆಯಲ್ಲಿ ಪರದಾಡುತ್ತಿದ್ದಾರೆ. ಕಳೆದ ಐದಾರು ದಿನಗಳ ಹಿಂದೆ ಸೋನು ಪಾಟೀಲ್ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆಸ್ಪತ್ರೆ ಕರ್ಚಿಗೆ ಹಣವಿಲ್ಲದೆ ಒದ್ದಾಡುತ್ತಿದ್ದಾರೆ. ಕಂಡಕಂಡವರ ಬಳಿ ಸಹಾಯ ಕೇಳಿದರು ಯಾರು ಮುಂದೆ ಬಂದಿಲ್ಲ. ಕೊನೆಗೆ ಕಿಚ್ಚ ಸುದೀಪ್ ಹಣಕಾಸಿನ ನೆರವು ನೀಡಿದ್ದಾರೆ.
ಸಹಾಯ ಹಸ್ತ ಚಾಚಿದ ಸುದೀಪ್
ಈ ಬಗ್ಗೆ ಸೋನು ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ಬೇಕಿತ್ತು. ಕಂಡಕಂಡವರ ಬಳಿ ಕೇಳಿದೆ ಆದರೆ ಯಾರು ಸಹಾಯಕ್ಕೆ ಮುಂದೆ ಬಂದಿಲ್ಲ. ಕೊನೆಗೆ ಸುದೀಪ್ ಅವರ ಬಳಿ ಕೇಳಿದೆ. ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಸುದೀಪ್ ಅವರಿಗೆ ವಿಶೇಷ ಕಾಳಜಿ. ಹಾಗಾಗಿ ಅವರ ಬಳಿ ಕೇಳಿದೆ. ಯಾವುದೇ ಮಾತು ಆಡದೆ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ಕಟ್ಟಿದ್ದಾರೆ. ನಮ್ಮ ಬಳಿ ಒಂದು ರೂಪಾಯಿ ಸಹ ಖರ್ಚು ಮಾಡಿಸಿಲ್ಲ ಎಂದು ಕಣ್ಣೀರಾಕಿದ್ದಾರೆ.
ತಾಯಿ ಫೋಟೊ ಹಂಚಿಕೊಂಡ ನಟಿ
ಆಸ್ಪತ್ರೆಯ ಬೆಡ್ ನಲ್ಲಿ ಮಲಗಿರುವ ತಾಯಿಯ ಫೋಟೋವನ್ನು ಶೇರ್ ಮಾಡಿ, ವಿಶ್ವ ತಾಯಂದಿರ ದಿನಕ್ಕೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೇಗ ಹುಷರಾಗು ಅಮ್ಮ ಎಂದು ಬರೆದುಕೊಂಡಿದ್ದಾರೆ.
ಆನಾರೋಗ್ಯದಿಂದ ಚೇತರಿಸಿಕೊಂಡಿರುವ ಸುದೀಪ್
ಸುದೀಪ್ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಸದ್ಯ ಚೇತರಿಸಿಕೊಂಡಿರುವ ಕಿಚ್ಚ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನೇನು ಕಿರುತೆರೆ ನಿರೂಪಣೆಗೆ ಮರಳಲಿದ್ದಾರೆ ಎನ್ನುವಷ್ಟೊತ್ತಿಗೆ ಕೊರೊನಾದಿಂದ ಬಿಗ್ ಬಾಸ್ ಶೋ ರದ್ದಾಗುತ್ತಿದೆ. ಸದ್ಯ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.