Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿ.ಎನ್.ಸತ್ಯ ಅವರಿಗೆ ಟ್ವಿಟ್ಟರ್ ನಲ್ಲಿ ನಮನ ಅಂತಿಮ ಸಲ್ಲಿಸಿದ ಸುದೀಪ್
ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರಾಗಿದ್ದ ಪಿ.ಎನ್.ಸತ್ಯ ನಿನ್ನೆ ನಿಧನರಾಗಿದ್ದಾರೆ. ಪಿ.ಎನ್.ಸತ್ಯ ಕಳೆದುಕೊಂಡ ಕನ್ನಡ ಚಿತ್ರರಂಗ ಕಣ್ಣೀರು ಹಾಕುತ್ತಿದೆ. ಚಿತ್ರರಂಗದ ಗಣ್ಯರು ಈಗ ಸತ್ಯ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ನಟ ಸುದೀಪ್ ಸಹ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಪಿ.ಎನ್.ಸತ್ಯ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
''ನಾನು ಇನ್ನೂ ಪಿ.ಎನ್.ಸತ್ಯ ಅವರ ಸಾವಿನ ಸುದ್ದಿಯಿಂದ ಹೊರ ಬರಲು ಪ್ರಯತ್ನ ಮಾಡುತ್ತಿದ್ದೇನೆ. ನಾನು ಅವರ ಜೊತೆಗೆ ಅನೇಕ ಕಾರ್ಯಕ್ರಮಗಳಲ್ಲಿ ಮಾತನಾಡುವ ಅವಕಾಶ ಸಿಕ್ಕಿತ್ತು. ಜೊತೆಗೆ ಅವರ ಜೊತೆಗೆ 'ಗೂಳಿ' ಸಿನಿಮಾದಲ್ಲಿ ಕೆಲ ಮಾಡುವ ಅವಕಾಶವನ್ನು ಪಡೆದಿದೆ. ಆದರೆ ಇಷ್ಟು ಬೇಗ ಅವರ ಹೊರಟು ಬಿಟ್ಟರು!. ಅವರ ಆತ್ಮಕ್ಕೆ ಶಾಂತಿ ಸಿಗಲಿ.'' ಎಂದು ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
I’m stil trying to come in terms with the news that PN Satya is no more.
— Kichcha Sudeepa (@KicchaSudeep) May 6, 2018
Have had th opportunity to interact with him on several occasions and to work for him in Gooli.
Gone too soon.
Prayers for his soul to rest in peace.
ಇದರ ಜೊತೆಗೆ ನಟ ದರ್ಶನ್ ಕೂಡ ಟ್ವಿಟ್ಟರ್ ಖಾತೆಯಲ್ಲಿ ತಮ್ಮ ಗೆಳೆಯ ಪಿ.ಎನ್.ಸತ್ಯ ಅವರ ಬಗ್ಗೆ ನಾಲ್ಕು ಸಾಲು ಬರೆದುಕೊಂಡಿದ್ದಾರೆ. ''ನನ್ನ ಆಪ್ತ ಸ್ನೇಹಿತರಲ್ಲೊಬ್ಬರು, ''ನನ್ನ 'ಮೆಜೆಸ್ಟಿಕ್' ಚಿತ್ರದ ನಿರ್ದೇಶಕರು ಪಿ.ಎನ್ ಸತ್ಯ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಸತ್ಯ ರವರ ಆತ್ಮಕ್ಕೆ ಶಾಂತಿ ಸಿಗಲಿ.'' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಅಗಲಿದ ಆಪ್ತ ಸ್ನೇಹಿತ ಪಿ.ಎನ್.ಸತ್ಯ ಬಗ್ಗೆ ನಟ ದರ್ಶನ್ ನುಡಿ
ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪಿ.ಎನ್.ಸತ್ಯ ನಿನ್ನೆ ಸಂಜೆ 7.30 ಸುಮಾರಿಗೆ ನಿಧನರಾದರು. ಸದ್ಯ ಪಿ.ಎನ್.ಸತ್ಯ ಅವರ ಮೃತ ದೇಹವನ್ನು ಅಂತಿಮ ದರ್ಶನಕ್ಕಾಗಿ 11.30ರ ವರೆಗೆ ಇಡಲಾಗಿದೆ. ಆ ಬಳಿಕ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಿ ಮದ್ಯಾಹ್ನ 3 ಗಂಟೆಗೆ ಬನಶಂಕರಿಯ ಹಿಂದೂ ರುಧ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.