Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜಯನಗರ 4th ಬ್ಲಾಕ್' ವೆಂಕಿ ಅಜ್ಜ ನಿಧನ, ಧನಂಜಯ್ ಕಂಬನಿ
ನಿರ್ದೇಶಕ ಸತ್ಯ ಅವರ ಪ್ರೀತಿಯ ಅಜ್ಜ, ಗುರು ಸುಬ್ಬರಾವ್ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ನಟ ಧನಂಜಯ್ ಸಹ ಕಂಬನಿ ಮಿಡಿದಿದ್ದಾರೆ.
ರಂಗಕರ್ಮಿಯೂ ಆಗಿದ್ದ ಸುಬ್ಬರಾವ್ ಅವರು ನಟ ಧನಂಜಯ್ ಜೊತೆಗೆ ಕಿರುಚಿತ್ರ 'ಜಯನಗರ 4th ಬ್ಲಾಕ್' ಕಿರು ಚಿತ್ರದಲ್ಲಿ ನಟಿಸಿದ್ದರು. ಕಿರುಚಿತ್ರದಲ್ಲಿ ವೆಂಕಿ ಎಂಬ ಪಾತ್ರದಲ್ಲಿ ನಟಿಸಿದ್ದರು ಸುಬ್ಬರಾವ್.
ಸುಬ್ಬರಾವ್ ಕುರಿತು ಭಾವುಕ ಪೋಸ್ಟ್ ಹಾಕಿರುವ ನಿರ್ದೇಶಕ ಸತ್ಯ, 'ನನ್ನ ಅಜ್ಜ, ನನ್ನ ಕ್ರಿಯಾಶೀಲತೆಯ ಗುರು, ಅನೇಕ ಪೌರಾಣಿಕ ಪಾತ್ರಗಳನ್ನು ನನಗೆ ಪರಿಚಯಿಸಿದ ಮೇಷ್ಟರು, ರಾಷ್ಟ್ರಪ್ರಶಸ್ತಿ ವಿಜೇತ ಸುಬ್ಬಾರಾವ್ 96 ವಸಂತಗಳ ತುಂಬು ಜೀವನ ಪೂರೈಸಿ ನಿರ್ಗಮಿಸಿದ್ದಾರೆ, ಅವರಿತ್ತ ಸ್ಪೂರ್ತಿಗೆ ಕೊನೆ ಎಂಬುದಿಲ್ಲ' ಎಂದಿದ್ದಾರೆ ಸತ್ಯ.
ನಟ ಧನಂಜಯ್ ಸಹ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಿದ್ದು, 'ಜಯನಗರ 4th ಬ್ಲಾಕ್ ನಲ್ಲಿ ಜೊತೆಯಾದ ಜೀವ, ಸ್ಫೂರ್ತಿಯಾದ ಜೀವ, ನನ್ನ ಪಾಲಿನ ವೆಂಕಿ, ಸುಬ್ಬರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ' ಎಂದಿದ್ದಾರೆ.
Recommended Video
ಜಯನಗರ 4th ಬ್ಲಾಕ್ ಸಿನಿಮಾದಲ್ಲಿ ಧನಂಜಯ್ ಅವರ ಹಿರಿಯ ಸ್ನೇಹಿತನಾಗಿ ಅದ್ಭುತವಾಗಿ ನಟಿಸಿದ್ದರು ಸುಬ್ಬಾರಾವ್. ಅವರ ವೆಂಕಿ ಪಾತ್ರ ಬಹಳ ಚೆನ್ನಾಗಿತ್ತು.