Don't Miss!
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಉಪೇಂದ್ರ 5 ಲಕ್ಷ ನೆರವು
ಧಾರಾಕಾರ ಮಳೆಯಿಂದ ನಲುಗಿರುವ ಉತ್ತರ ಕರ್ನಾಟಕದ ಜನರ ಸಹಾಯಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಮುಂದೆ ಬಂದಿದ್ದಾರೆ. ಇದೀಗ ನಟ ಉಪೇಂದ್ರ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ 5 ಲಕ್ಷ ಹಣ ನೀಡಲು ಉಪೇಂದ್ರ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು 5 ಲಕ್ಷ ಹಣವನ್ನು ದೇಣಿಗೆಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ''ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಿ'' ಎಂದು ಕೇಳಿಕೊಂಡಿದ್ದಾರೆ.
ಉತ್ತರ ಕರ್ನಾಟಕ ಜನರ ನೆರವಿಗೆ ಬಂದ ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ
ಪ್ರಜಾಕೀಯ ಪಕ್ಷದ ಮೂಲಕ ಬದಲಾವಣೆ ತರಬೇಕು ಎಂದು ಪ್ರಯತ್ನ ಪಡುತ್ತಿರುವ ಉಪೇಂದ್ರರಿಗೆ ಇನ್ನು ದೊಡ್ಡ ಮಟ್ಟದ ಜನರು ಬೆಂಬಲ ಸಿಕ್ಕಿಲ್ಲ. ಆದರೆ, ಅವರ ಈ ಕೆಲಸಕ್ಕೆ ಅಭಿಮಾನಿಗಳ ಮೆಚ್ಚಿಗೆ ಸಿಕ್ಕಿದೆ. ಬರೀ ಟ್ವೀಟ್ ಮಾಡದೆ, ಹಣದ ನೆರವನ್ನು ನೀಡಿ ಉಪೇಂದ್ರ ಮಾದರಿ ಆಗಿದ್ದಾರೆ.
ಕನ್ನಡ ಚಿತ್ರರಂಗದ ಇತರ ಸ್ಟಾರ್ ಗಳು ಕೂಡ ಉತ್ತರ ಕರ್ನಾಟಕದ ಬಗ್ಗೆ ಟ್ವೀಟ್ ಮಾಡಿದ್ದಾರೆ. ನಟ ದರ್ಶನ್, ಸುದೀಪ್, ಶರಣ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ಹೀಗೆ ಅನೇಕರು ಸಹಾಯಕ್ಕೆ ಮುಂದಾಗಿದ್ದಾರೆ.
ಉತ್ತರ ಕರ್ನಾಟಕ ಜನರ ನೆರವಿಗೆ ನಿಂತ ಕನ್ನಡ ಚಿತ್ರರಂಗ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಪ್ರವಾಹದ ಸ್ಥಿತಿಯಲ್ಲಿ ಇವೆ. ಮಳೆ ನೀರಿನಿಂದಾಗಿ ಅಲ್ಲಿನ ಜನರ ಜೀವನ ಅಸ್ತವ್ಯಸ್ತವಾಗಿದೆ.