Don't Miss!
- News ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ, 55,000 ರೂಪಾಯಿ ದಂಡ
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯೂರು ರೈತನ ಈರುಳ್ಳಿ ಖರೀದಿಸಿದ ನಟ ಉಪೇಂದ್ರ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರು ಬೆಳೆದಿದ್ದ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ.
Recommended Video
ಲಾಕ್ ಡೌನ್ ಸಮಯದಲ್ಲಿ ಜನರ ಸಹಾಯಕ್ಕೆ ನಿಂತಿರುವ ಉಪೇಂದ್ರ, ರೈತರಿಂದ ನೇರವಾಗಿ ಬೆಳೆ ಖರೀದಿಸಿ ಅದನ್ನು ಅಗತ್ಯವಿರುವ ಜನರಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಬೆಳೆ ಬೆಳೆದು ಮಾರಲು ಆಗದೆ ಕಷ್ಟದಲ್ಲಿರುವ ರೈತರಿಗೂ ಆ ಮೂಲಕ ನೆರವಾಗುತ್ತಿದ್ದಾರೆ.
ರೈತರ ಬೆಳೆದ ಬೆಳೆಯನ್ನು ತಮಗೆ ಹೇಗೆ ಮಾರಬೇಕು ಎಂಬ ಬಗ್ಗೆ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ವಿವರವಾದ ಮಾಹಿತಿ ಹಂಚಿಕೊಂಡಿದ್ದು ಈಗಾಗಲೇ ಹಲವು ಜಿಲ್ಲೆಗಳ ರೈತರು ತಮ್ಮ ಬೆಳೆಯನ್ನು ಉಪೇಂದ್ರ ಅವರಿಗೆ ಮಾರಿದ್ದಾರೆ.
ಉಪೇಂದ್ರ ಪ್ರಕಟಿಸಿದ್ದ ಮಾಹಿತಿಯನ್ನು ಗಮನಿಸಿದ ಹಿರಿಯೂರು ತಾಲ್ಲೂಕು ಪಟ್ರೇನಹಳ್ಳಿ ಗ್ರಾಮದ ರೈತ ಮಹೇಶ್, ಉಪೇಂದ್ರ ಅವರಿಗೆ ಕರೆ ಮಾಡಿ ಮಾಹಿತಿ ಪಡೆದು ತಾವು ಬೆಳೆದ ಈರುಳ್ಳಿಯನ್ನು ಕೊಂಡೊಯ್ದು ಮಾರಾಟ ಮಾಡಿ ಬಂದಿದ್ದಾರೆ.
ರೈತ ಮಹೇಶ್ ಒಟ್ಟು 60 ಚೀಲ, 3000 ಕೆಜಿ ಈರುಳ್ಳಿಯನ್ನು ಉಪೇಂದ್ರ ಅವರಿಗೆ ಮಾರಿದ್ದಾರೆ ಸಾಗಾಟ ವೆಚ್ಚ ಸೇರಿಸಿ 37 ಸಾವಿರ ಹಣ ಕೊಟ್ಟು ಈರುಳ್ಳಿ ಖರೀದಿಸಿರುವ ಉಪೇಂದ್ರ ಸಂಕಷ್ಟದಲ್ಲಿದ್ದ ರೈತನಿಗೆ ನೆರವಾಗಿದ್ದಾರೆ.
ಈ ಬಗ್ಗೆ ಫಿಲ್ಮೀಬೀಟ್ ಜೊತೆ ಮಾತನಾಡಿರುವ ರೈತ ಮಹೇಶ್, 'ನಾನು ಒಂದು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೆ. 70 ಚೀಲ ಈರುಳ್ಳಿ ದೊರೆಯಿತು. ಅದರಲ್ಲಿ 10 ಚೀಲ ಕೊಳೆತು ಹೋಗಿತ್ತು. ಬೆಳೆದ ಈರುಳ್ಳಿ ಮಾರಾಟ ಮಾಡಲು ಸೂಕ್ತ ವೇದಿಕೆ ಮತ್ತು ಬೆಲೆ ಸಿಗುತ್ತಿಲ್ಲ ಎಂದು ಹಾಗೆಯೇ ಶೇಖರಿಸಿದ್ದೆವು. ಉಪೇಂದ್ರ ಅವರು ಹಾಕಿದ್ದ ಫೇಸ್ಬುಕ್ ಪೋಸ್ಟ್ ನೋಡಿ ಕರೆ ಮಾಡಿದೆ. ಆಗ ಅವರು ತಂದುಕೊಡಿ ಎಂದರು. ಅಂತೆಯೇ ಮಾಡಿದೆ. ಉಪೇಂದ್ರ ಅವರು ನಮ್ಮ ಬೆಳೆಗೆ ಕೊಟ್ಟಿರುವ ಬೆಲೆಯಿಂದ ತೃಪ್ತಿಯಾಗಿದೆ. ತಡರಾತ್ರಿ ಈರುಳ್ಳಿ ತೆಗೆದುಕೊಂಡು ಹೋದೆವು. ಅದನ್ನು ಅವರು ಖರೀದಿಸಿ ಕಾರ್ಮಿಕರಿಗೆ ಹಂಚುತ್ತಿರುವುದು ತುಂಬಾ ಖುಷಿಯಾಯಿತು. ಇಂತಹ ಸಂದರ್ಭದಲ್ಲಿ ಅವರು ಮಾಡುವ ಸಾಮಾಜಿಕ ಕಾರ್ಯಕ್ಕೆ ನಮಗೆ ಲಾಭ ಬೇಡ ಅನ್ನಿಸಿತು. ರೈತರಿಗೆ ಅನುಕೂಲ ಆಗಲಿ ಎಂದು ಮುಂದೆ ಬಂದಿರುವ ಸಂತಸ. ಮಾರುಕಟ್ಟೆಯಲ್ಲಿ ಈ ಬೆಲೆ ಸಿಗುತ್ತಿರಲಿಲ್ಲ. ಉಪೇಂದ್ರ ಸರ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ' ಎಂದಿದ್ದಾರೆ ಮಹೇಶ್.
ಉಪೇಂದ್ರ ಅವರು ಚಿಕ್ಕಬಳ್ಳಾಪುರ ರೈತನಿಗೆ ಟೊಮೆಟೊ, ಮತ್ತೊಬ್ಬರಿಂದ ನೀರಿನ ಬಾಟಲ್, ಮತ್ತೊಬ್ಬ ದಾನಿಯಿಂದ ಅಕ್ಕಿ ಇತರೆ ವಸ್ತುಗಳನ್ನು ಸಂಗ್ರಹಿಸಿ ಅವಶ್ಯಕತೆ ಇರುವವರಿಗೆ ವಿತರಣೆ ಮಾಡುತ್ತಿದ್ದಾರೆ. ಉಪೇಂದ್ರ ಅವರ ಸಾಮಾಜಿಕ ಕಳಕಳಿಯನ್ನು ಹಲವರು ಪ್ರಶಂಸಿಸಿದ್ದಾರೆ.