Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ವಿನೋದ್ ರಾಜ್ ಕಾರು ಡಿಕ್ಕಿ; ಇಬ್ಬರು ಗಂಭೀರ
ಕನ್ನಡ ಚಿತ್ರರಂಗದ ಖ್ಯಾತ ತಾರೆ ಡಾ.ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್ ಅವರ ಬೊಲೆರೋ (KA52 M1678) ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ (ಫೆಬ್ರವರಿ 2) ಬೆಳಗ್ಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನೆಲಮಂಗಲದ ಮೊದಲನೇ ಟೋಲ್ ಬಳಿ ಈ ಘಟನೆ ಸಂಭವಿಸಿದೆ.
ಈ ಸಂಬಂಧ ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬೊಲೆರೋ ಚಾಲಕನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆದರೆ ಡ್ರೈವರ್ ಹೆಸರನ್ನು ಎಫ್ ಐಆರ್ ನಲ್ಲಿ ಉಲ್ಲೇಖಿಸಿಲ್ಲ. ಪೊಲೀಸರ ಪ್ರಕಾರ ನಟ ವಿನೋದ್ ರಾಜ್ ಅವರು ವಾಹನವನ್ನು ಚಲಾಯಿಸುತ್ತಿರಲಿಲ್ಲ. ಘಟನೆ ನಡೆದಾಗ ಅವರು ಮನೆಯಲಿದ್ದರು ಎಂದು ಪೊಲೀಸರು ವಿವರ ನೀಡಿದ್ದಾರೆ.
ಅಪಘಾತ ನಡೆದಾಗ ಮತ್ತೊಂದು ವಾಹನದಲ್ಲಿ ಬರುತ್ತಿದ್ದ ಸುನಿಲ್ ಗೆಳೆಯರು ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದಾಗ ಅಷ್ಟರಲ್ಲ್ಲಾಗಲೆ ಬೊಲೆರೋ ವಾಹನ ಪೊಲೀಸ್ ಠಾಣೆ ಬಳಿ ಇತ್ತು. ಅಪಘಾತವಾಗಿರುವ ಬಗ್ಗೆ ಅದಾಗಲೆ ಪೊಲೀಸರಿಗೆ ಚಾಲಕ ಮಾಹಿತಿ ನೀಡಿ ಹೊರಟು ಹೋಗಿದ್ದರು ಎನ್ನುತ್ತವೆ ಮೂಲಗಳು.
ಬಳಿಕ ಸಬ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಅವರು ವಾಹನ ಅಪಘಾತಕ್ಕೆ ಒಳಗಾಗಿರುವ ಬಗ್ಗೆ ವಿನೋದ್ ರಾಜ್ ಅವರಿಗೆ ವಿಷಯ ತಿಳಿಸಿದ್ದಾರೆ. ಆದರೆ ವಿನೋದ್ ರಾಜ್ ಅವರು ಇದುವರೆಗೂ ಆಸ್ಪತ್ರೆಗಾಗಲಿ, ತಮ್ಮ ಕರೆಗಾಗಲಿ ಸ್ಪಂದಿಸುತ್ತಿಲ್ಲ. ತಮ್ಮ ಗೆಳೆಯರು ಮಾತ್ರ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು 'ಬೆಂಗಳೂರು ಮಿರರ್' ಪತ್ರಿಕೆ ಜೊತೆ ಮಾತನಾಡುತ್ತಾ ಸುನಿಲ್ ಗೆಳೆಯ ಉದಯ್ ನೋವು ತೋಡಿಕೊಂಡಿದ್ದಾರೆ.