Don't Miss!
- News ಕೋಲಾರ ಟಿಕೆಟ್ ಗಾಗಿ ಫೈಟಿ; ಶಾಸಕರ ರಾಜೀನಾಮೆ ಎಚ್ಚರಿಕೆ - ಡಿಕೆ ಶಿವಕುಮಾರ್ ಏನಂದ್ರು?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Automobiles Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- Finance ಬೆಂಗಳೂರಿನ ರಿಯಲ್ ಎಸ್ಟೇಟ್ ಸಂಸ್ಥೆ ಕಾಂಕಾರ್ಡ್ನಿಂದ 100 ಕೋಟಿಗೆ 4.5 ಎಕರೆ ಭೂಮಿ ಸ್ವಾಧೀನ
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದ ಯಶ್-ರಾಧಿಕಾ ದಂಪತಿ
Recommended Video
ಹತ್ತು ತಿಂಗಳ ಹಿಂದಿನಿಂದ ಪಟ್ಟ ಪರಿಶ್ರಮಕ್ಕೆ ಫಲ ಸಿಕ್ಕಿರುವ ಸಾರ್ಥಕತೆಯಲ್ಲಿ ನಟ ಯಶ್ ಮತ್ತು ರಾಧಿಕಾ ಪಂಡಿತ್ ಇಂದು (ನವೆಂಬರ್ 27) ಕೊಪ್ಪಳದ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದ್ದಾರೆ.
ನಾಲ್ಕು ವರ್ಷಗಳಿಂದ 96 ಎಕರೆಯ ತಲ್ಲೂರು ಕೆರೆ ಬತ್ತಿ ಹೋಗಿತ್ತು. ಸಂಪೂರ್ಣವಾಗಿ ಹೂಳಿನಿಂದ ತುಂಬಿದ್ದ ಈ ಕೆರೆಯ ಹೂಳನ್ನ ತೆಗೆಯುವ ಕಾರ್ಯಕ್ಕೆ ಯಶ್ ಮತ್ತು ರಾಧಿಕಾ ಚಾಲನೆ ನೀಡಿದ್ರು. ಯಶೋಮಾರ್ಗದ ವತಿಯಿಂದ 4 ಕೋಟಿ ವೆಚ್ಚದಲ್ಲಿ ತಲ್ಲೂರು ಕೆರೆಯ ಅಭಿವೃದ್ದಿಯ ಕೆಲಸ ಪ್ರಾರಂಭಿಸದ ಕೆಲವೇ ದಿನಗಳಲ್ಲಿ ಕೆರೆಯಲ್ಲಿ ನೀರು ಕಾಣಿಸಿಕೊಂಡಿತ್ತು.
ಅದೇ ಸಮಯಕ್ಕೆ ಚೆನ್ನಾಗಿ ಮಳೆ ಸುರಿದ ಪರಿಣಾಮ ಕೆರೆ ತುಂಬಿದೆ. ಸಾಕಷ್ಟು ನೀರು ಶೇಖರಣೆಯಾಗಿದ್ದು ಸದ್ಯ ಸುತ್ತಮುತ್ತಲಿದ ಹತ್ತು ಗ್ರಾಮಗಳಿಗೆ ತಲ್ಲೂರು ಕೆರೆಯ ನೀರು ಉಪಯೋಗವಾಗ್ತಿದೆ. ಇದರಿಂದ ಸಂತೋಷಗೊಂಡ ರೈತರು ಹಾಗೂ ಸ್ಥಳೀಯರು ಯಶ್ ಮತ್ತು ರಾಧಿಕಾ ಪಂಡಿತ್ ರನ್ನ ತಲ್ಲೂರಿಗೆ ಕರೆಸಿ ಅವರಿಂದಲೇ ಕೆರೆಗೆ ಬಾಗಿನ ಅರ್ಪಿಸಿದ್ದಾರೆ.
ರೈತರ ಪಾಲಿಗೆ ಆಧುನಿಕ 'ಭಗೀರಥ'ನಾದ ರಾಕಿಂಗ್ ಸ್ಟಾರ್ ಯಶ್
ಯಶೋಮಾರ್ಗದಿಂದ ಪ್ರಾರಂಭವಾದ ಮೊದಲ ಕಾಯಕವೇ ಯಶಸ್ಸು ಕಂಡಿದೆ. ಮುಂದಿನ ದಿನಗಳಲ್ಲಿ ಯಶೋಮಾರ್ಗದ ವತಿಯಿಂದ ಮತ್ತಷ್ಟು ಕೆರೆಗಳ ಜೀರ್ಣೋದ್ದಾರದ ಕೆಲಸಗಳು ನಡೆಯಲಿವೆ.