Don't Miss!
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈನಲ್ಲಿ ರಾಖಿ ಭಾಯ್ ಯಶ್: ಕಾರಣವೇನು?
ನಟ ಯಶ್ ಹಠಾತ್ತನೆ ಮುಂಬೈಗೆ ಹೋಗಿದ್ದಾರೆ. ಮಾಸ್ಕ್ ಧರಿಸಿಕೊಂಡು, ಉದ್ದನೆಯ ಗಡ್ಡ ಬಿಟ್ಟು ಬಲು ಸ್ಟೈಲಿಷ್ ಆಗಿ ಯಶ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು.
Recommended Video
ಅಷ್ಟೆ ಅಲ್ಲದೆ ಮುಂಬೈನಲ್ಲಿ ಅಭಿಮಾನಿಗಳು ಯಶ್ಗೆ ಮುತ್ತಿಗೆ ಹಾಕಿದ್ದರು, ಅಭಿಮಾನಿಗಳು ಯಶ್ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಹರಿದಾಡುತ್ತಿದೆ. ಆದರೆ ಯಶ್ ಮುಂಬೈಗೆ ಹೋಗಿದ್ದಾದರೂ ಯಾಕೆ?
ಯಶ್ ಇದೀಗ ಮುಂಬೈಗೆ ಹೋಗಿರುವುದು ಗಾಂಧಿ ನಗರದಲ್ಲಿ ಕುತೂಹಲ ಮೂಡಿಸಿದೆ. ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ನಿರ್ಮಾಪಕರೊಂದಿಗೆ, ನಿರ್ದೇಶಕರೊಂದಿಗೆ ಚರ್ಚಿಸಲು ಮುಂಬೈಗೆ ಹೋಗಿದ್ದಾರೆ ಎನ್ನುವ ಗಾಳಿ ಸುದ್ದಿಗಳು ಹರಿದಾಡುತ್ತಿವೆ.
ಯಶ್ಗೆ ಮುಂಬೈಗೆ ಹೋಗಿರುವುದು ಚಿತ್ರೀಕರಣಕ್ಕೆ. ಆದರೆ ಸಿನಿಮಾದ ಚಿತ್ರೀಕರಣಕ್ಕಾಗಿ ಅಲ್ಲ ಬದಲಿಗೆ ಜಾಹಿರಾತು ಚಿತ್ರೀಕರಣಕ್ಕೆ. ಮುಂಬೈನಲ್ಲಿ ದೊಡ್ಡ ಬ್ರ್ಯಾಂಡ್ ಒಂದರ ಜಾಹೀರಾತು ಚಿತ್ರೀಕರಣದಲ್ಲಿ ನಟ ಯಶ್ ಪಾಲ್ಗೊಂಡಿದ್ದಾರೆ. ಜೊತೆಗೆ ಯಶ್ರ ಮುಂದಿನ ಸಿನಿಮಾದ ನಿರ್ಮಾಪಕರು ಮುಂಬೈ ಮೂಲದವರು ಎಂದು ಹೇಳಲಾಗುತ್ತಿದ್ದು, ಜಾಹೀರಾತು ಚಿತ್ರೀಕರಣದ ಬಳಿಕ ತಮ್ಮ ಮುಂದಿನ ಸಿನಿಮಾದ ನಿರ್ಮಾಪಕರನ್ನು ಭೇಟಿಯಾಗಿ ಅಲ್ಲಿಯೇ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
'ಕೆಜಿಎಫ್ 2' ಬಳಿಕ ಯಶ್ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ ಹಾಗೆಂದು ಯಶ್ ಖಾಲಿ ಸಹ ಕುಳಿತಿಲ್ಲ. ಹಲವು ಜಾಹೀರಾತುಗಳಲ್ಲಿ ಯಶ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ. ಪತ್ನಿ ರಾಧಿಕಾ ಜೊತೆಗೆ ಅಡುಗೆ ಎಣ್ಣೆಯ ಜಾಹೀರಾತಿನಲ್ಲಿ ಕಾಣಿಸಿಕೊಂಡ ಯಶ್, ಗಡ್ಡಕ್ಕೆ ಹಚ್ಚುವ ತೈಲ, ಕಬ್ಬಿಣ, ಸೆಲ್ಕಾನ್ ಮೊಬೈಲ್, ಫ್ಲಿಪ್ಕಾರ್ಟ್ ಇನ್ನೂ ಕೆಲವು ಬ್ರ್ಯಾಂಡ್ಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಕಾರಣ ಹಲವು ಬ್ರ್ಯಾಂಡ್ಗಳು ಯಶ್ ಅನ್ನು ತಮ್ಮ ರಾಯಭಾರಿಯನ್ನಾಗಿ ನೇಮಿಸಿಕೊಂಡಿದ್ದಾರೆ.
ಯಶ್ರ ಮುಂದಿನ ಸಿನಿಮಾ ಯಾವುದಾಗಿರಲಿದೆ ಎಂಬುದು ಭಾರಿ ಕುತೂಹಲ ಮೂಡಿಸಿದೆ. 'ಕೆಜಿಎಫ್ 2' ಚಿತ್ರೀಕರಣ ಮುಗಿದು ಬಹುಕಾಲವಾಗಿದೆ. ಆದರೆ ಈ ವರೆಗೆ ಯಾವುದೇ ಹೊಸ ಸಿನಿಮಾವನ್ನು ಯಶ್ ಘೋಷಿಸಿಲ್ಲ. 'ಕೆಜಿಎಫ್' ಅಂಥಹಾ ಅತ್ಯುತ್ತಮ ಸಿನಿಮಾದಲ್ಲಿ ನಟಿಸಿರುವ ಯಶ್, ಇನ್ನು ಮುಂದೆ ಆಯ್ಕೆ ಮಾಡಿಕೊಳ್ಳುವ ಸಿನಿಮಾ ಅದೇ ಮಾದರಿಯಲ್ಲಿರಬೇಕು ಎಂಬ ನಿರೀಕ್ಷೆಯಿಂದಾಗಿ ಅಳೆದು-ತೂಗಿ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ಯಶ್ ನಟಿಸಿರುವ 'ಕೆಜಿಎಫ್ 2' ಈಗಾಗಲೇ ಎರಡು ಬಾರಿ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದ್ದು, ಸಿನಿಮಾವು 2022ರ ಏಪ್ರಿಲ್ 14ಕ್ಕೆ ಬಿಡುಗಡೆ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ವಿಲನ್ ಆಗಿ ಸಂಜಯ್ ದತ್, ರಾಜಕಾರಣಿ ಪಾತ್ರದಲ್ಲಿ ರವೀನಾ ಟಂಡನ್, ನಟ ಪ್ರಕಾಶ್ ರೈ ಇನ್ನೂ ಹಲವು ಪ್ರತಿಭಾವಂತ ನಟ-ನಟಿಯರು ನಟಿಸಿದ್ದಾರೆ. 'ಕೆಜಿಎಫ್ 2' ಸಿನಿಮಾ ಬಿಡುಗಡೆಗೆ ಮುನ್ನವೇ ಕೋಟ್ಯಂತರ ರುಪಾಯಿ ವ್ಯವಹಾರ ಮಾಡಿದೆ.